ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಬಿಸಿಲ ಬೇಗೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಜನರು ಮನೆಯಿಂದ ಹೊರಬರಲು ಹಿಂದುಮುಂದು ನೋಡುವಂತಾಗಿದೆ. ಇದರಿಂದ ಹೋಟೆಲ್ ಉದ್ಯಮಕ್ಕೆ ಧಕ್ಕೆ ಉಂಟಾಗಿದೆ. ಅದ್ಯಾಕೆ ಅಂತೀರಾ ಹಾಗಿದ್ರೆ ಈ ಸ್ಟೋರಿ ನೋಡಿ.. .ನಿಜ, ಸದಾ ತಂಪಾಗಿರುತ್ತಿದ್ದ ಬೆಂಗಳೂರು ಈ ಬಾರಿ ಸಖತ್ ಹಾಟ್ ಸಿಟಿಯಾಗಿಬಿಟ್ಟಿದೆ.ಇದರಿಂದ ಮನೆಯಿಂದ ಹೊರಹೋಗುವುದನ್ನು ಆದಷ್ಟು ಕಡಿಮೆ ಮಾಡಿರುವ ಜನ ಹೋಟೆಲ್ಗೆ ಹೋಗುವುದನ್ನೂ ಕಡಿಮೆ ಮಾಡಿದ್ದಾರೆ. ಈ ಕಾರಣದಿಂದಾಗಿ ಹೋಟೆಲ್ ವ್ಯಾಪಾರ ವಹಿವಾಟು ಶೇ.30ರಷ್ಟು ಕುಸಿತವಾಗಿದೆ ಎನ್ನಲಾಗುತ್ತಿದೆ.
ಉದ್ಯೋಗ ಆಕಾಂಕ್ಷಿಗಳೇ ಗಮನಿಸಿ.. BBMPಯಲ್ಲಿ 11,307 ಗ್ರೂಪ್ ಡಿ ಹುದ್ದೆಗಳು ಖಾಲಿ ಇದೆ..! ಇಂದೇ ಅರ್ಜಿ ಸಲ್ಲಿಸಿ
ಬಿಸಿಲು ಜಾಸ್ತಿ ಇರುವ ಪರಿಣಾಮ ಟೀ ಕಾಫಿ ಕುಡಿಯುವವರ ಸಂಖ್ಯೆಯೂ ಕಡಿಮೆಯಾಗಿದೆ. ಹೀಗಾಗಿ ವ್ಯಾಪಾರ ವಹಿವಾಟು ಕುಂಠಿತವಾಗಿದೆ. ಮುಂದಿನ ದಿನಗಳಲ್ಲಿ ಇದೇ ರೀತಿ ಮುಂದುವರಿದರೆ ಹೋಟೆಲ್ ಉದ್ಯಮ ಕಷ್ಟವಿದೆ ಎಂದು ಅನೇಕ ವ್ಯಾಪಾರಸ್ಥರು ಹೇಳುತ್ತಿದ್ದಾರೆ. ಈ ಬಿಸಿಲಿನಲ್ಲಿ ಮನೆಯಿಂದ ಹೊರಬರುವುದೇ ಕಷ್ಟ. ಇನ್ನು ಹೋಟೆಲ್ಗೆ ಹೋಗುವುದು ಎಲ್ಲಿಂದ ಬಂತು. ಈ ಬಿಸಿಯಲ್ಲಿ ಊಟ, ತಿಂಡಿ ಮಾಡುವುದೇ ಕಷ್ಟವಾಗುತ್ತಿದೆ. ಹೀಗಾಗಿ ನಾವು ಹೋಟೆಲ್ಗಳಿಗೆ ಬರುವುದನ್ನೇ ಕಡಿಮೆ ಮಾಡಿದ್ದೇವೆ. ಟೀ ಕಾಫಿ ಬದಲು ಜ್ಯೂಸ್, ಎಳನೀರು ಕುಡಿಯುತ್ತಿದ್ದೇವೆ ಎನ್ನತ್ತಾರೆ ಗ್ರಾಹಕರು.
ರಾಜ್ಯದ 25 ಜಿಲ್ಲೆಗಳಲ್ಲಿ ಹೀಟ್ ವೇವ್…!
ಏಪ್ರಿಲ್ನಲ್ಲಿ ಶೂನ್ಯ ಮಳೆ ದಾಖಲು…!
41 ವರ್ಷದ ಬಳಿಕ ಶೂನ್ಯ ಮಳೆ ವರದಿ…!
ಇನ್ನೂ ಐದು ದಿನ ಬೆಂಗಳೂರಿನಲ್ಲಿ ಮತ್ತು ರಾಜ್ಯದ ವಿವಿಧೆಡೆ ಒಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸಾಮಾನ್ಯವಾಗಿ ಬೇಸಿಗೆಯಲ್ಲಿ ಮಳೆಯಾಗುತ್ತೆ…ಆದರೇ ಈ ಬಾರಿ ವರುಣಾರಾಯನ್ನು ಮುನಿಸಿಕೊಂಡಂತೆ ಕಾಣುತ್ತಿದ್ದು, ಫೆಬ್ರವರಿ, ಮಾರ್ಚ್ ಹಾಗೂ ಏಪ್ರಿಲ್ ಮೂರು ತಿಂಗಳಲ್ಲೂ ಶೂನ್ಯ ಮಳೆ ದಾಖಲಾಗಿದೆ. ಇನ್ನೂ…ಕಳೆದ 41 ವರ್ಷದ ಹಿಂದೆ ಅಂದರೆ 1983ರಲ್ಲಿ ಏಪ್ರಿಲ್ ತಿಂಗಳಲ್ಲಿ ಮಳೆಯಾಗಿರಲಿಲ್ಲ…ಅದನ್ನ ಹೊರತು ಪಡಿಸಿದರೆ ಈ ವರ್ಷವೇ ಶೂನ್ಯ ಮಳೆಪ್ರಮಾಣ ದಾಖಲಾಗಿದೆ.
ಕಳೆದ ಎರಡು ದಿನಗಳಿಂದ ನಗರದಲ್ಲಿ 38 ರಿಂದ 39 ಉಷ್ಣಾಂಶ ದಾಖಲಾಗುತ್ತಿದ್ದು ಮುಂದಿನ ದಿನಗಳಲ್ಲಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ವಿವಿಧ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಏರಿಕೆ ಜೊತೆಗೆ ಕೆಲವು ಜಿಲ್ಲೆಗಳಲ್ಲಿ ಬಿಸಿಗಾಳಿ ಮುಂದುವರೆಯಲಿದೆ. ಈ ಹಿಂದೆ 2016 ರ ಏಪ್ರಿಲ್ಲ್ 25 ರಂದು ಬೆಂಗಳೂರು ನಗರದಲ್ಲಿ 39.2 ಗರಿಷ್ಠ ಉಷ್ಣಾಂಶ ದಾಖಲಾಗಿತ್ತು. ಒಟ್ನಲ್ಲಿ ಬಿಸಿಲ ಬೇಗೆಯಿಂದ ಜನರು ತತ್ತರಿಸಿಹೋಗುತ್ತಿದ್ದು, ಯಾವಾಗಪ್ಪ ಮಳೆಯಾಗುತ್ತೆ ಅಂತ ಜನರು ಜಾತಕ ಪಕ್ಷಿ ಅಂತೇ ಕಾಯ್ತಾ ಇರೋದಂತೂ ನಿಜ.