ಮೈಸೂರು: “ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಕುರಿತು ಅವನನ್ನೇ ಕೇಳಿಕೊಳ್ಳಿ. ಅದು ದೊಡ್ಡ ವಿಚಾರ ಅದರ ಬಗ್ಗೆ ನಾನು ಮಾತನಾಡಲ್ಲ.” – ಇದು ಜೆಡಿಎಸ್ ನ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರ ಬಂಧನದ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಹೇಳಿದ ಮಾತು. ಮೈಸೂರಿನಲ್ಲಿ ಈ ಬಗ್ಗೆ ಪದೇ ಪದೇ ಸುದ್ದಿಗಾರರು ಪ್ರಶ್ನಿಸಿದಾಗ ಕೈ ಮುಗಿದು, ಮಾತನಾಡಲ್ಲ ಎಂದಷ್ಟೇ ಹೇಳಿ ಪ್ರತಿಕ್ರಿಯಿಸಲು ನಿರಾಕರಿಸಿದರು.
https://ainlivenews.com/which-of-fish-and-chicken-is-good-for-weight-loss-see-here/
ಇನ್ನು ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅಭ್ಯರ್ಥಿಯಾಗುವ ವಿಚಾರವಾಗಿ ಪ್ರತಿಕ್ರಿಯಿಸಿ, ಡಿ.ಕೆ ಶಿವಕುಮಾರ್ ತಂತ್ರ ಮಾಡುತ್ತಿದ್ದಾರೋ, ಕುತಂತ್ರ ಮಾಡುತ್ತಿದ್ದಾರೋ ಗೊತ್ತಿಲ್ಲ. ಆದರೆ ಇವರ ಆಟ ಏನೂ ನಡೆಯೊಲ್ಲ. ಲೋಕಸಭಾ ಚುನಾವಣೆ ಫಲಿತಾಂಶದಲ್ಲೇ ಇವರ ಬಂಡವಾಳ ಬದಲಾಗಿದೆ. ಉಪ ಚುನಾವಣೆಯಲ್ಲೂ ಕೂಡ ಜನರು ಇವರನ್ನು ತಿರಸ್ಕರಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.