ಬೆಂಗಳೂರು:- ಮಾಜಿ ಸಚಿವ ಹೆಚ್ ಡಿ ರೇವಣ್ಣರ ಪುತ್ರ ಹಾಗೂ ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಹಾಸನ ಮಾತ್ರವಲ್ಲದೆ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದೆ. ಜೆಡಿಎಸ್ ಕಾರ್ಯಕರ್ತನಿಗೆ ಸಲಿಂಗ ಲೈಂಗಿಕ ದೌರ್ಜನ್ಯ ನೀಡಿರೋ ಆರೋಪದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದಾರೆ.
Bengaluru: HMT ಕಂಪನಿಯ ಉನ್ನತ ಅಧಿಕಾರಿಗಳ ಸಭೆ ನಡೆಸಿದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ..!
ಯುವಕನಿಗೆ ಅಸಹಜ ಲೈಂಗಿಕ ದೌರ್ಜನ್ಯವೆಸಗಿದ ಆರೋಪದಲ್ಲಿ ಸೂರಜ್ ರೇವಣ್ಣ ವಿರುದ್ಧ ಹಾಸನದ ಹೊಳೆನರಸೀಪುರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಹೀಗಾಗಿ ನಿನ್ನೆ ಸಂಜೆ ಸುಮಾರು 7 ಗಂಟೆಗೆ ಸೆನ್ ಠಾಣೆಗೆ ಬಂದ ಸೂರಜ್ನನ್ನ ಮ್ಯಾರಥನ್ ವಿಚಾರಣೆ ನಡೆಸಿದ್ದಾರೆ. ಟೆಕ್ನಿಕಲ್ ಎವಿಡೆನ್ಸ್ಗಾಗಿ ಠಾಣೆಗೆ ಕರೆತಂದಿದ್ದ ಪೊಲೀಸ್ರು ಮಧ್ಯರಾತ್ರಿವರೆಗೂ ವಿಚಾರಣೆ ಮಾಡಿದ್ದಾರೆ. ಅಲ್ಲದೆ ಸಂತ್ರಸ್ತನ ವಿರುದ್ಧ ಬ್ಲಾಕ್ ಮೇಲ್ ದೂರು ನೀಡಿದ್ದ ಬಗ್ಗೆ ಸೂರಜ್ ರೇವಣ್ಣನನ್ನು ವಿಚಾರಣೆ ಮಾಡಿದ್ದಾರೆ.
ಮಧ್ಯರಾತ್ರಿವರೆಗೂ ವಿಚಾರಣೆ ನಡೆಸಿದ ಪೊಲೀಸರು ಬಳಿಕ ಸೂರಜ್ನನ್ನು ಹೆಚ್ಚಿನ ವಿಚಾರಣೆಗಾಗಿ ಅಜ್ಞಾತ ಸ್ಥಳಕ್ಕೆ ಕರೆದೊಯ್ದಿದ್ದಾರೆ. ಹಾಸನದ ಸೈಬರ್ ಕ್ರೈಮ್ ಠಾಣೆಯಿಂದ ಹೊಳೆನರಸೀಪುರ ಡಿವೈಎಸ್ಪಿ ಕರೆದೊಯ್ದಿದ್ದಾರೆ. ಈ ವೇಳೆ ತಮ್ಮದೇ ಕಾರಿನಲ್ಲಿ ಸೂರಜ್ ರೇವಣ್ಣ ಪೊಲೀಸರ ಜೊತೆ ತೆರಳಿದ್ದಾರೆ. ಸದ್ಯ ಸೂರಜ್ನನ್ನ ವಶಕ್ಕೆ ಪಡೆದು ವಿಚಾರಣೆಗೆ ಕರೆದೊಯ್ದಿದ್ದು ವಿಚಾರಣೆ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳಲಿದ್ದಾರೆ. ಇದೇ ವೇಳೆ ಸೂರಜ್ ಕಾರನ್ನು ನೋಡಿದ ಅವರ ಅಭಿಮಾನಿಗಳು ಜೈಕಾರ ಹಾಕಿದ್ದಾರೆ.
ಇನ್ನು ಸೂರಜ್ ರೇವಣ್ಣ ವಿರುದ್ಧ ದೂರು ನೀಡಿದ ಸಂತ್ರಸ್ತ ವ್ಯಕ್ತಿ ವೈದ್ಯಕೀಯ ಪರೀಕ್ಷೆಗಾಗಿ ಬೆಂಗಳೂರಿಗೆ ತೆರಳಿದ್ದಾರೆ. ನಿನ್ನೆ ಸಂಜೆಯಷ್ಟೇ ಸೂರಜ್ ವಿರುದ್ಧ ಸಂತ್ರಸ್ತ ದೂರು ನೀಡಿದ್ದ. ಪೆನ್ಡ್ರೈವ್ ಕೇಸ್ ಬೆನ್ನಲ್ಲೇ ಈಗ ಗನ್ನಿಕಡದ ತೋಟದ ಮನೆಯ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಹಾಸನ ಮಾತ್ರವಲ್ಲದೆ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದೆ.