ಬೆಂಗಳೂರು:- ಬಿಜೆಪಿ ಶಾಸಕ ಸೋಮಶೇಖರ್ ಗೆ ಸುರೇಶ್ ಕುಮಾರ್ ಬಹಿರಂಗ ಪತ್ರ ಬರೆದಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪತ್ರ ಬರೆದಿರುವ ಸುರೇಶ್ ಕುಮಾರ್, ಸೋಮಶೇಖರ್ ನಿಲುವಿನ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ಜತೆಗೆ ಬಿಜೆಪಿ ಕಾರ್ಯಕರ್ತರ ನೋವಿನ ಬಗ್ಗೆಯೂ ಉಲ್ಲೇಖಿಸಿದ್ದಾರೆ.
ತಾವು ಬಹಳ ದಿನದ ಕಣ್ಣು ಮುಚ್ಚಾಟದ ನಂತರ ಈಗ ರಾಜ್ಯ ಸಭೆಯ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿಯ ವಿರುದ್ಧ ಮತ ಚಲಾಯಿಸಿ ಆತ್ಮಸಾಕ್ಷಿಯ ಹೆಸರಿನಲ್ಲಿ ಆಡಳಿತ ಪಕ್ಷದ ಅಭ್ಯರ್ಥಿಗೆ ತಮ್ಮ ಮತವನ್ನು ನೀಡಿ ಕೃತಾರ್ಥರಾಗಿದ್ದೀರಿ
ಅತ್ಯಂತ ಅನುಕೂಲಸಿಂಧು ಪದ ಎಂಬುದು ನಿಮಗೂ ಗೊತ್ತು. ಕೆಲವು ದಿವಸಗಳ ಹಿಂದೆ ಪದವೀಧರ ಶಿಕ್ಷಕರ ಕ್ಷೇತ್ರದ ನಮ್ಮ ಎನ್ಡಿಎ ಅಭ್ಯರ್ಥಿಯ ವಿರುದ್ಧ ಪ್ರಚಾರ ಮಾಡಿದ್ದು ಸಾಲದೆ ಆಡಳಿತ ಪಕ್ಷದ ಅಭ್ಯರ್ಥಿಗೆ ಬೆಂಬಲ ಸೂಚಿಸಲು ಅನೇಕ ಕಾರ್ಯಕ್ರಮಗಳನ್ನು ಮಾಡಿದ್ದೀರಿ. ನನ್ನ ಪಕ್ಷದ ಸಾಮಾನ್ಯ ಕಾರ್ಯಕರ್ತನಿಗೆ ಒಂದೇ ವೇದನೆ. ‘ನಾವು ಸೋಮಶೇಖರ್ರಿಗೆ ಏನು ಮಾಡಿದ್ದೆವು? ನಮ್ಮ ಪ್ರೀತಿ ಗೌರವದಲ್ಲಿ ಅವರಿಗೇನು ಕೊರತೆ ಇತ್ತು? ಕಾಂಗ್ರೆಸ್ ಕಾರ್ಯಕರ್ತರು ನಮಗಿಂತ ಹೆಚ್ಚು ಏನು ಕೊಡಬಲ್ಲರು?’ ನಮ್ಮ ಪರಿವಾರದ ಪ್ರಮುಖರಿಗೂ ಅದೇ ಬೇಸರ. ನಾವು ಇಷ್ಟು ಚೆನ್ನಾಗಿ ನೋಡಿಕೊಂಡ, ನಂಬಿದ್ದ ಸೋಮಶೇಖರ್ ಹೀಗ್ಯಾಕೆ ಆದರು? ಎಂಬುದು. ದೇವರು ನಿಮಗೆ ಒಳಿತು ಮಾಡಲಿ’ ಎಂದು ಸುರೇಶ್ ಕುಮಾರ್ ಪತ್ರದಲ್ಲಿ ಉಲ್ಲೇಖಿಸಲಾಗಿದೆ.