ಭಾರತ ತಂಡದ ಸ್ಫೋಟಕ ಮಧ್ಯಮ ಕ್ರಮಾಂಕದ ಬ್ಯಾಟರ್ ಸೂರ್ಯ ಕುಮಾರ್ ಯಾದವ್ ಅವರನ್ನು ಐಸಿಸಿ
ವರ್ಷದ ಟಿ20 ತಂಡದ ನಾಯಕರಾಗಿ ಹೆಸರಿಸಲಾಗಿದೆ.
ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್, ಸ್ಪಿನ್ನರ್ ರವಿ ಬಿಷ್ಟೋಯಿ ಮತ್ತು ಎಡಗೈ ವೇಗಿ ಅರ್ಷ್ದೀಪ್ ಸಿಂಗ್ ಅವರೂ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.ಸತತ ಎರಡನೇ ಬಾರಿಗೆ ಸೂರ್ಯಕುಮಾರ್ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಟಿ20 ವರ್ಷದ ಕ್ರಿಕೆಟಿಗ ರೇಸ್ನಲ್ಲೂ ಅವರು ಇದ್ದಾರೆ.
2023ರಲ್ಲಿ ಅವರು ಉತ್ತಮ ರನ್ ಗಳಿಕೆ ಮೂಲಕ ಹೆಸರು ಮಾಡಿದ್ದಾರೆ. ಶ್ರೀಲಂಕಾ ವಿರುದ್ಧದ ವರ್ಷದ ಮೊದಲ ಪಂದ್ಯದಲ್ಲಿ ಕೇವಲ 7 ರನ್ ಸಿಡಿಸಿದ್ದ ಸೂರ್ಯ, ನಂತರದ ಎರಡು ಪಂದ್ಯಗಳಲ್ಲಿ ಕ್ರಮವಾಗಿ 5 ಮತ್ತು 112 ರನ್ ಸಿಡಿಸಿದ್ದರು. ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಲ್ಲಿ 20 ಮತ್ತು 40 ಆಸುಪಾಸಿನಲ್ಲಿ ಔಟಾಗಿದ್ದ ಅವರು 44 ಎಸೆತಗಳಲ್ಲಿ 83 ರನ್ ಸಿಡಿಸಿ ತಮ್ಮ ಸಾಮರ್ಥ್ಯ ಪ್ರದರ್ಶಿಸಿದ್ದರು.
ಕಳೆದ ವರ್ಷದಲ್ಲಿ ರೋಹಿತ್ ಶರ್ಮಾ ಗಾಯಗೊಂಡಾಗ ಸೂರ್ಯ, ಟಿ20 ತಂಡವನ್ನು ಮುನ್ನಡೆಸಿದ್ದಾರೆ.