ಶಿವಮೊಗ್ಗ: ನನ್ನ ಪರವಾಗಿ ಇಷ್ಟು ಜನರು ಬಂದಿದ್ದನ್ನು ಕಂಡು ಹೃದಯ ತುಂಬಿ ಬಂದಿದೆ ಎಂದು ಬಿಜೆಪಿ ಬಂಡಾಯ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ” ನನ್ನ ಪರವಾಗಿ ಇಷ್ಟು ಜನರು ಬಂದಿದ್ದನ್ನು ಕಂಡು ಹೃದಯ ತುಂಬಿ ಬಂದಿದೆ. ನಾನು ಆಶೀರ್ವಾದ ತೆಗೆದುಕೊಂಡು ಬಂದ ಸ್ವಾಮೀಜಿಗಳಿಗೆಲ್ಲ ಕಣ್ಣೀರು ಹಾಕಿಸಿದ್ದಾರೆ. ಸ್ವಾಮೀಜಿಗಳಿಗೆ ಕಣ್ಣೀರು ಹಾಕಿಸುತ್ತಾರೆ ಎಂದು ಗೊತ್ತಿರಲಿಲ್ಲ.
ವಾಸ್ತು ಪ್ರಕಾರ ಮನೆಯಲ್ಲಿ ಬಿದಿರುಗಳನ್ನು ಈ ರೀತಿಯಾಗಿ ಇಟ್ಟುಕೊಂಡರೆ ಅದೃಷ್ಟವಂತೆ.!
ಗೊತ್ತಿದ್ದರೆ ನಾನು ಹೋಗುತ್ತಿರಲಿಲ್ಲ. ಫೋನ್ನಲ್ಲೇ ಆಶೀರ್ವಾದ ತೆಗೆದುಕೊಳ್ಳುತ್ತಿದ್ದೆ. ಈಗ ಸ್ವಾಮೀಜಿಗಳು ನನಗೆ ಫೋನ್ ಮಾಡಿ ಹೇಳುತ್ತಿದ್ದಾರೆ. ನಮಗೆ ಕಣ್ಣೀರು ಹಾಕಿಸಿದವರಿಗೆ ಒಳ್ಳೆಯದಾಗಲ್ಲ ಎನ್ನುತ್ತಿದ್ದಾರೆ. ಸ್ವಾಮೀಜಿಗಳಿಗೂ ಬೆದರಿಕೆ ಹಾಕುತ್ತಾರೆ ಎಂದರೆ ಇವರ ದರ್ಪ ಎಷ್ಟಿರಬಹುದು?” ಎಂದು ಈಶ್ವರಪ್ಪ ಪ್ರಶ್ನಿಸಿದರು.