ನೆಲಮಂಗಲ: ನೆಲಮಂಗಲ ತಾಲೂಕಿನ, ರಾಷ್ಟ್ರೀಯ ಹೆದ್ದಾರಿ ೪೮ ರ ಸುಧಾನಗರ ಗ್ರಾಮದ ಪೆಟ್ರೋಲ್ ಬಂಕ್ ಬಳಿ, ನಿಂತಿದ್ದ ಕ್ಯಾಂಟರ್ ಲಾರಿಗೆ ಹಿಂಬದಿಯಿಂದ ಸ್ವಿಫ್ಟ್ ಕಾರು ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯವಾಗಿದೆ.
ಬುಧವಾರ ಮಧ್ಯಾಹ್ನ ಸುಮಾರು ೦೩.೩೦ ರವೇಳೆಯಲ್ಲಿ, ಬೆಂಗಳೂರಿನಿಂದ ತುಮಕೂರು ಕಡೆ ಹೋಗಲು ನಿಂತಿದ್ದ ಕ್ಯಾಂಟರ್ ಲಾರಿಗೆ, ಅದೇ ಮಾರ್ಗದಲ್ಲಿ ಹಿಂಬದಿಯಿಂದ ಬಂದ ಕಾರು, ನಿರ್ಮಾಣವಾಗುತ್ತಿರುವ ರಸ್ತೆ ಯ ವಿಭಜಕಕ್ಕೆ ಡಿಕ್ಕಿಯಾಗಿದೆ, ಸ್ವಿಫ್ಟ್ ಕಾರು ಮುಂಭಾಗ ಸಂಪೂರ್ಣ ಜಖಂ ಆಗಿದೆ, ಕಾರಿನಲ್ಲಿದ್ದ ಇಬ್ಬರಿಗೂ ಗಾಯವಾಗಿದೆ, ಗಾಯಗೊಂಡವರು, ನೆಲಮಂಗಲ ತಾಲೂಕಿನ ಟಿ.ಬೇಗೂರು ಬಳಿಯ ಬೈರನಹಳ್ಳಿಯವರು ಎಂದು ಗುರುತಿಸಲಾಗಿದೆ, ಇಬ್ಬರು ಪ್ರಯಾಣಿಕರು ಪಾನಮತ್ತರಾಗಿದ್ದರು ಎಂದು ಶಂಕಿಸಲಾಗಿದೆ.
ಗಾಯಾಳುಗಳನ್ನು ತಿಪ್ಪಗೊಂಡನಹಳ್ಳಿ ಬಳಿಯ ಸಿದ್ದಾರ್ಥ ಆಸ್ಪತ್ರೆಗೆ ದಾಖಲಿಸಲಾಗಿದೆ, ಸ್ಥಳಕ್ಕೆ ಅಂಬುಲೇನ್ಸ್ ಸಿಬ್ಬಂದಿ, ಹೆದ್ದಾರಿ ಗಸ್ತು ಪೊಲೀಸರು ಭೇಟಿ ನೀಡಿದ್ದರು, ಘಟನೆಯೂ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡಿದಿದೆ, ಅಪಘಾತ ಹಿನ್ನಲೆ ಸ್ಥಳೀಯರು ಅಪಘಾತ ಸ್ಥಳದಲ್ಲಿ ಜಮಾಯಿಸಿರುವುದು ಕಂಡುಬಂದಿತು.