ಉತ್ತರ ಪ್ರದೇಶ ::- ಇಲ್ಲಿನ ಸಿಕಂದರಾ ಪೊಲೀಸ್ ಠಾಣೆ ವ್ಯಾಪ್ತಿಯ ಜಗನ್ನಾಥಪುರ ಗ್ರಾಮದ ಬಳಿ ಚರಂಡಿಗೆ ಸ್ವಿಫ್ಟ್ ಕಾರು ಉರುಳಿ ಬಿದ್ದ ಹಿನ್ನೆಲೆ 6 ಮಂದಿ ಧಾರುಣ ಸಾವನ್ನಪ್ಪಿದ್ದಾರೆ.
ಬಲಿಯಾದ ಆರು ಮಂದಿಯನ್ನು ದೇರಾಪುರ ಮತ್ತು ಶಿವರಾಜಪುರ ನಿವಾಸಿಗಳು ಎಂದು ಗುರುತಿಸಲಾಗಿದೆ.
![Demo](https://ainlivenews.com/wp-content/uploads/2023/12/spoorthi-1.jpg)
ವಾಹನದಲ್ಲಿದ್ದ ಇಬ್ಬರು ಮಕ್ಕಳನ್ನು ರಕ್ಷಿಸಲಾಗಿದೆ. ತಿಲಕ ಸಮಾರಂಭಕ್ಕೆ (ಮದುವೆಗೆ ಸಂಬಂಧಿಸಿದ) ಕಾರ್ಯಕ್ರಮ ಮುಗಿಸಿ ಹಿಂತಿರುಗುತ್ತಿದ್ದಾಗ ಕಾರು ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದು ಪಲ್ಟಿಯಾಗಿ ಅಪಘಾತ ಸಂಭವಿಸಿದೆ.
![](https://ainlivenews.com/wp-content/uploads/2024/01/Ad-Banner-copy-scaled.jpg)