ಮುಂಬರುವ ಟಿ-20 ವಿಶ್ವಕಪ್ ಕ್ರಿಕೆಟ್ ಟೂರ್ನಿಗೆ ಹಿಟ್ ಮ್ಯಾನ್ ರೋಹಿತ್ ಶರ್ಮಾ ಅವರೇ ನಾಯಕರಾಗಿ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ.
ಈ ಕುರಿತು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅಧಿಕೃತಪಡಿಸಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಅವರು, ರೋಹಿತ್ ಶರ್ಮಾ ಅವರ ನಾಯಕತ್ವದಲ್ಲಿ ಭಾರತ 2024ರ ಟಿ-20 ವಿಶ್ವಕಪ್ ಗೆಲ್ಲುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.
ಚೆನ್ನೈ ಸೂಪರ್ ಕಿಂಗ್ಸ್ ತಂಡದ ಬ್ರಾಂಡ್ ಅಂಬಾಸಿಡರ್ ಆಗಿ ನಟಿ ಕತ್ರಿನಾ ಕೈಫ್
ಜಯ್ ಶಾ ಹೇಳಿಕೆಯಿಂದ ರೋಹಿತ್ ಶರ್ಮಾ ಹಾಗೂ ಹಾರ್ದಿಕ್ ಪಾಂಡ್ಯ ಇಬ್ಬರಲ್ಲಿ ಯಾರು ನಾಯಕ ಎಂಬ ಬಗ್ಗೆ ಸ್ಪಷ್ಟನೆ ಲಭಿಸಿದೆ. ಹಾರ್ದಿಕ್ ಪಾಂಡ್ಯ ಉಪನಾಯಕನ ಜವಾಬ್ದಾರಿ ನಿಭಾಯಿಸಲಿದ್ದಾರೆ. ಈ ಬಗ್ಗೆ ಬಿಸಿಸಿಐ ಅಧಿಕೃತ ಹೇಳಿಕೆ ನೀಡಬೇಕಿದೆ. ಈಗಾಗಲೇ ಮುಂಬೈ ಇಂಡಿಯನ್ಸ್ ತಂಡದ ನಾಯಕತ್ವದಿಂದ ರೋಹಿತ್ ಶರ್ಮಾ ಅವರನ್ನು ಕೆಳಗಿಳಿಸಿ ಹಾರ್ದಿಕ್ ಪಾಂಡ್ಯಗೆ ನಾಯಕತ್ವದ ಜವಾಬ್ದಾರಿ ನೀಡಿರುವುದು ಗೊತ್ತೇ ಇದೆ.
ಈ ಬಾರಿ ಐಪಿಎಲ್ ಭಾರತದಲ್ಲಿ ಡೌಟ್?
ಐಪಿಎಲ್ಗೆ ಭಾರತದಲ್ಲಿ ಭಾರಿ ಕ್ರೇಜ್ ಇದೆ. ಎರಡು ತಿಂಗಳು ನಡೆಯುವ ಚುಟುಕು ಕ್ರಿಕೆಟ್ ದೇಶದಲ್ಲಿ ಹಬ್ಬದ ವಾತಾವರಣ ಉಂಟು ಮಾಡುತ್ತದೆ. ಆದರೆ, ಈ ಬಾರಿ ಚುನಾವಣೆಯಿಂದಾಗಿ ದುಬೈನಲ್ಲಿ ಐಪಿಎಲ್ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಇದಕ್ಕೆ ಐಪಿಎಲ್ ಚೇರ್ಮನ್ ಅರುಣ್ ಸಿಂಗ್ ಸ್ಪಷ್ಟನೆ ನೀಡಿದ್ದಾರೆ. ಈ ವರ್ಷ ಐಪಿಎಲ್ ಭಾರತದಲ್ಲೇ ನಡೆಯಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.