ಬಳ್ಳಾರಿ ಜಿಲ್ಲೆ ಕಂಪ್ಲಿ ತಾಲ್ಲೂಕಿನ ತಾಸಿಲ್ದಾರ್ ಕಚೇರಿ ಸಭಾಂಗಣದಲ್ಲಿ ಇಂದು ರೀಡ್ ಸಂಸ್ಥೆ ಹಾಗೂ ಮಹಿಳೆ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಆಡಳಿತ ಇವರ ಸಂಯುಕ್ತ ಆಶ್ರಯದಲ್ಲಿ ಬಾಲ್ಯ ವಿವಾಹಗಳನ್ನು ತಡೆಯುವ ತಾಲ್ಲೂಕು ಮಟ್ಟದ
ಸಮನಯ ಮತ್ತು ಪರಿಶೀಲನಾ ಸಮಿತಿ ಸಭೆ ಮಾಡಲಾಯಿತು
ಬಾಲ್ಯ ವಿವಾಹ ಅಪರಾಧ, ಅದಕ್ಕೆ ಸಹಾಯ ಮಾಡುವುದು ಅಪರಾಧ, ಅದರ ಪ್ರಯತ್ನವೂ ಅಪರಾಧ, ಅದು ಕಾನೂನಿನ ಉಲ್ಲಂಘನೆ, ಅದಕ್ಕೆ ಕ್ರಿಮಿನಲ್ ಪ್ರಕರಣ ದಾಖಲು ಮಾಡಲಾಗುವುದು ಎಂಬ ಮಾಹಿತಿ ಪ್ರತಿಯೊಬ್ಬರಿಗೂ ತಲುಪಬೇಕು, ಜಿಲ್ಲೆಯ ಪ್ರತಿಯೊಂದು ಶಾಲೆಯ ಹಣ್ಣು ಮಕ್ಕಳಿಗೂ ಮಹಿಳಾ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಬೇಕು, ಪ್ರತಿಯೊಂದು ಶಾಲೆಯ ಮುಖ್ಯೋಪಧ್ಯಾಯರೂ ಕೂಡ ಮಕ್ಕಳ ರಕ್ಷಣಾಧಿಕಾರಿಯಾಗಿ ಕೆಲಸ ಮಾಡಬೇಕು, ಹೆಣ್ಣು ಮಕ್ಕಳು ಶಾಲೆಗೆ ಗೈರಾದರೆ ಅದಕ್ಕೆ ನೈಜಕಾರಣಗಳ ಪತ್ತೆ ಮಾಡಬೇಕು ಎಂದು ಕಂಪ್ಲಿ ತಹಸಿಲ್ದಾರ್ ಎಸ್ ಶಿವರಾಜ್ ಅಧಿಕಾರಿಗಳಿಗೆ ಸೂಚನೆ ನೀಡಿದರು
ಈ ಸಂದರ್ಭದಲ್ಲಿ ತಹಶೀಲ್ದಾರ್ ಎಸ್ ಶಿವರಾಜ್ ಎ ಎಸ್ ಐ ಬಸವರಾಜ್. ಎಸ್ ಸಿ ರಾಘವೇಂದ್ರ ಆರೋಗ್ಯ ಇಲಾಖೆ ಅಧಿಕಾರಿ ಅರುಣ್ ಕುಮಾರ್ ರೀಡ್ ಸಂಸ್ಥೆ ಪ್ರಾಜೆಕ್ಟ್ ಮ್ಯಾನೇಜರ್ ಪ್ರವೀಣ್ ಕುಮಾರ್ ಸಿಆರ್ಪಿ ವೀರೇಶ್ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಭಾಗಿಯಾಗಿದ್ದರು
ವರದಿ ಬೀರೋ ರಿಪೋರ್ಟ್, ಚೆನ್ನಕೇಶವ ಕಂಪ್ಲಿ