ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಚಾಮರಾಜಪೇಟೆಯ ಗುಡ್ಡಳ್ಳಿಯಲ್ಲಿ ಬಾಲಕನ ತಲೆಯ ಮೇಲೆ ಟಾಟಾ ಏಸ್ ಹರಿದು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
Health Care: ಖಾಲಿ ಹೊಟ್ಟೆಯಲ್ಲಿ ಎಂದಿಗೂ ಈ ಆಹಾರ ಮತ್ತು ಪಾನೀಯವನ್ನು ಮುಟ್ಟಲೇಬೇಡಿ!
ಆಟವಾಡುತ್ತಾ ಓಡುತ್ತಿದ್ದ ಬಾಲಕ ನಿಲ್ಲಿಸಿದ್ದ ಸ್ಕೂಟಿಗೆ ಅಕಸ್ಮಾತಾಗಿ ಡಿಕ್ಕಿ ಹೊಡೆದು ಕೆಳಗೆ ಬಿದ್ದಿದ್ದಾನೆ. ಈ ವೇಳೆ ಪಕ್ಕದಲ್ಲೇ ಬರುತ್ತಿದ್ದ ಟಾಟಾ ಏಸ್ ಬಾಲಕ ತಲೆಯ ಮೇಲೆ ಹರಿದಿದೆ, ಘಟನೆಯ ದೃಶ್ಯ ಸಿಸಿಟಿವಿಯಲ್ಲಿ (CCTV) ಸೆರೆಯಾಗಿದೆ.
ಏನಿದು ಘಟನೆ?
ಬಾಲಕ ತನ್ನ ಪಾಡಿಗೆ ಮನೆಯ ಎದುರುಗಡೆ ಓಡಾಡಿಕೊಂಡಿದ್ದ. ಯಾರನ್ನೂ ಕೂಗಿಕೊಂಡು ಓಡಿ ಹೋಗ್ತಿದ್ದ ಬಾಲಕನ ಕೈಗೆ ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ತಾಗಿದೆ. ಈ ವೇಳೆ ಆಯತಪ್ಪಿ ರಸ್ತೆಗೆ ಬಿದ್ದಿದ್ದಾನೆ. ಪಕ್ಕದಲ್ಲೇ ಬರುತ್ತಿದ್ದ ಟಾಟಾ ಏಸ್ ಬಾಲಕನ ತಲೆ ಮೇಲೆ ಹರಿದಿದೆ. ಸ್ಥಳದಲ್ಲೇ ಬಾಲಕ ಪ್ರಾಣ ಬಿಟ್ಟಿದ್ದು, ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.