ಪ್ರಸಕ್ತ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡ ಎಲ್ಲ ವಿಭಾಗಗಳಲ್ಲೂ ಉತ್ತಮ ಪ್ರದರ್ಶನ ತೋರುತ್ತಿದ್ದು, 2013ರ ನಂತರ ಐಸಿಸಿ ಟ್ರೋಫಿ ಗೆಲ್ಲುವ ಭರವಸೆ ಮೂಡಿಸಿದೆ ಎಂದು ಭಾರತ ತಂಡದ ಮಾಜಿ ಆಟಗಾರ ಹರ್ಭಜನ್ ಸಿಂಗ್ ಡಿಸ್ನಿ ಪ್ಲಸ್ ಹಾಟ್ ಸ್ಟಾರ್ ಗೆ ನೀಡಿರುವ ಸಂದರ್ಶನದಲ್ಲಿ ತಿಳಿಸಿದ್ದಾರೆ. “ಪ್ರಸಕ್ತ ಚುಟುಕು ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡ ಇದುವರೆಗೂ ಅತ್ಯಮೋಘ ಪ್ರದರ್ಶನ ತೋರಿದೆ. ತಂಡದಲ್ಲಿರುವ ಎಲ್ಲ 11 ಆಟಗಾರರು ಉತ್ತಮ ಲಯದಲ್ಲಿದ್ದಾರೆ. ಅಲ್ಲದೆ ಎಲ್ಲಾ ವಿಭಾಗಗಳನ್ನು ಉತ್ತಮ ರೀತಿಯಲ್ಲಿ ನಿಭಾಯಿಸಿದ್ದೇವೆ.
Rice Water: ಅನ್ನ ಬಸಿದ ಗಂಜಿ ನೀರು ಗುಟ್ಟು ತಿಳಿದ್ರೆ ಇನ್ಯಾವತ್ತು ಬಿಸಾಕುವುದಿಲ್ಲ..!
ಎಲ್ಲಾ ಆಟಗಾರರು ಉತ್ತಮ ಪ್ರದರ್ಶನ ತೋರುತ್ತಿದ್ದಾರೆ. ಅಲ್ಲದೆ ಅವರ ಆತ್ಮವಿಶ್ವಾಸವು ಉತ್ಕೃಷ್ಟ ಮಟ್ಟದಲ್ಲಿದೆ,” ಎಂದು ಖ್ಯಾತ ಕ್ರಿಕೆಟ್ ವಿವರಣೆಕಾರ ಹೇಳಿದ್ದಾರೆ. “ನಾವು (ಭಾರತ ತಂಡ) ಇದೇ ಲಯವನ್ನು ಮುಂದುವರಿಸಿಕೊಂಡು ಹೋದರೆ ಮತ್ತು ತಾಳ್ಮೆ ವಹಿಸಿದರೆ, 2007ರ ನಂತರ ಭಾರತ ದೇಶಕ್ಕೆ ಚಾಂಪಿಯನ್ ಪಟ್ಟ ತಂದುಕೊಡುವಲ್ಲಿ ಯಾವುದೇ ಅನುಮಾನವಿಲ್ಲ,” ಎಂದು ಹರ್ಭಜನ್ ಸಿಂಗ್ ಹೇಳಿದ್ದಾರೆ.