ಚಿಕ್ಕಬಳ್ಳಾಪುರ:- ರಾಜ್ಯಾದ್ಯಂತ ಇರುವ 21ಕ್ಕೂ ಹೆಚ್ಚು ಚಾರಣ ಸ್ಥಳಗಳಿಗೆ ರಾಜ್ಯ ಅರಣ್ಯ ಇಲಾಖೆ ತಾತ್ಕಾಲಿಕವಾಗಿ ನಿರ್ಬಂಧ ವಿಧಿಸಿದೆ.
ಚಾರಣದ ಟಿಕೆಟ್ ಬುಕಿಂಗ್ ಇಕೋ ಟೂರಿಸಂ ಮಾಡುತ್ತಿತ್ತು. ಇದೀಗ ಇಕೋ ಟೂರಿಸಂ ಬದಲು ಅರಣ್ಯ ಇಲಾಖೆ ಚಾರಣ ನಿರ್ವಹಣೆ ಮಾಡಲು ಮುಂದಾಗಿದೆ. ಇದರಿಂದ ಸೂಕ್ತ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಆಗಸ್ಟ್1, 2024 ರಿಂದ ತಾತ್ಕಾಲಿಕವಾಗಿ ಚಾರಣ ತಡೆಹಿಡಿಯಲಾಗಿದೆ ಎಂದು ಚಿಕ್ಕಬಳ್ಳಾಪುರ ಉಪಅರಣ್ಯ ಸಂರಕ್ಷಣಾಧಿಕಾರಿ ರಮೇಶ್ ತಿಳಿಸಿದ್ದಾರೆ.
ಕರ್ನಾಟಕ ಅರಣ್ಯ ಇಲಾಖೆಯ ವ್ಯಾಪ್ತಿಯಲ್ಲಿರುವ ಆಯ್ದ ಪ್ರಕೃತಿ ಸೊಬಗಿನ ತಾಣಗಳನ್ನು ಗುರುತಿಸಿ, ಪ್ರಕೃತಿ ಪ್ರಿಯರು ಹಾಗೂ ಸಾಹಸ ಚಾರಣಿಗರ ಅನುಕೂಲಕ್ಕೆಂದು ರಾಜ್ಯ ಸರ್ಕಾರ ಪರಿಸರ ಪ್ರವಾಸೋದ್ಯಮ ಮಂಡಳಿಯನ್ನು ನಿರ್ಮಿಸಿ, ಅದರಡಿ 20ಕ್ಕೂ ಹೆಚ್ಚು ಅಚ್ಚುಮೆಚ್ಚಿನ ಚಾರಣ ಸ್ಥಳಗಳನ್ನು ಮಂಡಳಿಯ ನಿರ್ವಹಣೆಗೆ ಸೂಚಿಸಿತ್ತು.