ತುಮಕೂರು: ಭೀಕರ ಬರಗಾಲ ಎದುರಾದ ಹಿನ್ನೆಲೆ ಗ್ರಾಮಸ್ಥರೆಲ್ಲಾ ಸೇರಿ ಕತ್ತೆಗಳಿಗೆ ಮದುವೆ ಮಾಡಿ ಮಳೆಗಾಗಿ ಪ್ರಾರ್ಥನೆ ಮಾಡಿರುವ ಘಟನೆ ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ನೊಣವಿನಕೆರೆ ಹೋಬಳಿಯ ಆಲ್ಬೂರು ಗ್ರಾಮದಲ್ಲಿ ನಡೆದಿದೆ. ಮಳೆ ಬಾರದ ಹಿನ್ನೆಲೆ,
ರೈತರೇ ಗಮನಿಸಿ.. ಸಪೋಟ ಹಣ್ಣಿನ ಕೃಷಿಯಿಂದ ಗಳಿಸಬಹುದು ಲಕ್ಷಗಟ್ಟಲೇ ಆದಾಯ..!
ನೀರಿಗಾಗಿ ಹಾಹಾಕಾರ ಎದುರಾಗಿದ್ದು, ಮಳೆ ಬಾರದಿದ್ದಾಗ ಕತ್ತೆಗಳಿಗೆ ಮದುವೆ ಮಾಡಿಸಿದರೆ ವಾಡಿಕೆಯಂತೆ ಮಳೆ ಬರುತ್ತೆ ಎಂಬ ಪೂರ್ವಜರ ನಂಬಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಗಂಡು, ಹೆಣ್ಣು ಕತ್ತೆಗಳಿಗೆ ವಧು-ವರನಂತೆ ಶೃಂಗಾರ ಮಾಡಿ ಮದುವೆ ಮಾಡಿ ಮಳೆಗಾಗಿ ಗ್ರಾಮಸ್ಥರು ಪ್ರಾರ್ಥನೆ ಸಲ್ಲಿಸಿದ್ದಾರೆ.