ಬೆಂಗಳೂರು: ಕೇರಳದ ವಯನಾಡು ಬಳಿ ಉಂಟಾಗಿರುವ ಭೀಕರ ಭೂಕುಸಿತದಿಂದ ಅನೇಕರು ಧಾರುಣ ಸಾವನ್ನಪ್ಪಿರುವ ಘಟನೆ ನನಗೆ ತೀವ್ರ ಆಘಾತ ಉಂಟು ಮಾಡಿದೆ ಎಂದು ಕೇಂದ್ರ ಸಚಿವರಾದ ಎಚ್.ಡಿ.ಕುಮಾರಸ್ವಾಮಿ ಅವರು ಟ್ವೀಟ್ ಮಾಡುವ ಮೂಲಕ ಬೇಸರ ವ್ಯಕ್ತಪಡಿಸಿದರು.
ಇನ್ನು ಅನೇಕರು ಮಣ್ಣಿನಡಿಯಲ್ಲಿ ಸಿಲುಕಿದ್ದು, ಅವರನ್ನು ರಕ್ಷಿಸುವ ಕಾರ್ಯ ಸಮರೋಪಾದಿಯಲ್ಲಿ ಸಾಗಿದೆ. ಗೌರವಾನ್ವಿತ ಪ್ರಧಾನಿಗಳುರು ತುರ್ತಾಗಿ ಸ್ಪಂದಿಸಿದ್ದು, ಕೇರಳದ ಮುಖ್ಯಮಂತ್ರಿಗಳ ಜತೆ ಮಾತನಾಡಿ, ರಕ್ಷಣಾ ಕಾರ್ಯಗಳಿಗೆ ಸಕಲ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ. ಹೀಗಾಗಿ ಮಾನ್ಯ ಪ್ರಧಾನಿಗಳನ್ನು ನಾನು ಅಭಿನಂದಿಸುತ್ತೇನೆ ಎಂದು ತಿಳಿಸಿದರು.
Beer Price Hike: ಮದ್ಯ ಪ್ರಿಯರಿಗೆ ಶಾಕ್ ಮೇಲೆ ಶಾಕ್: ಮತ್ತೊಮ್ಮೆ ಬಿಯರ್ ಬೆಲೆ ಏರಿಕೆ!
ಈ ದುರಂತದಲ್ಲಿ ಸಾವನ್ನಪ್ಪಿದವರಿಗೆ ಚಿರಶಾಂತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ಎಲ್ಲಾ ಕುಟುಂಬಗಳಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ.
https://x.com/hd_kumaraswamy/status/1818154417008554336?t=Ksi5qofxFV4iIx6EUGQDsQ&s=08
ಕೇರಳ ಸೇರಿ ದೇಶದೆಲ್ಲೆಡೆ ಭಾರೀ ಮಳೆ ಆಗುತ್ತಿದ್ದು, ಭೂಕುಸಿತ, ನೆರೆ ಉಂಟಾಗಿದೆ. ಕರ್ನಾಟಕದಲ್ಲಿಯೂ ಅನೇಕ ಜಿಲ್ಲೆಗಳಲ್ಲಿ ಇದೇ ಸಮಸ್ಯೆ ಸೃಷ್ಟಿಯಾಗಿದೆ. ಈ ಬಗ್ಗೆ ಸಾರ್ವಜನಿಕರು ಬಹಳ ಎಚ್ಚರಿಕೆ ವಹಿಸಬೇಕು ಹಾಗೂ ರಾಜ್ಯ ಸರಕಾರವೂ 24X7 ರಕ್ಷಣಾ ಸಿಬ್ಬಂದಿಯನ್ನು ಸನ್ನದ್ಧ ಸ್ಥಿತಿಯಲ್ಲಿಟ್ಟು, ಅಪಾಯವಿರುವ ಸ್ಥಳಗಳಲ್ಲಿ ಅಧಿಕಾರಿಗಳನ್ನು ನಿಯೋಜಿಸಬೇಕು.