ತುಮಕೂರು:- ಕುಣಿಗಲ್ ಪಟ್ಟಣದ ಜಿ.ಕೆ.ಬಿ.ಎಂ.ಎಸ್ ಮೈದಾನದಲ್ಲಿ ಡಿಕೆಎಸ್ ಚಾರಿಟೇಬಲ್ ಟ್ರಸ್ಟ್ ಹಾಗೂ ಅಕ್ಷರ ಫೌಂಡೇಶನ್ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಸಹಕಾರದೊಂದಿಗೆ ಸಂಸದ ಡಿಕೆ ಸುರೇಶ್ ಆಯೋಜಿಸಿದ್ದ ಉದ್ಯೋಗ ಮೇಳದಲ್ಲಿ ಭಯಾನಕ ಸುಂಟರಗಾಳಿ ಬೀಸಿದ ರಭಸಕ್ಕೆ ಭಾನೆತ್ತರಕ್ಕೆ ಹಾರಿ ಟೆಂಟ್ ಹೌಸ್ ಚೆಲ್ಲಾಪಿಲ್ಲಿಯಾಗಿರುವಂತಹ ಘಟನೆ ನಡೆದಿದೆ
ಘಟನೆಯಿಂದ ಯಾರಿಗೂ ಹಾನಿ ಸಂಭವಿಸಿಲ್ಲ. ಸಂಸದ ಡಿಕೆ ಸುರೇಶ್ ನೇತೃತ್ವದಲ್ಲಿ ಕಾರ್ಯಕ್ರಮ ನಡೆದಿದ್ದು, ಕುಣಿಗಲ್ ಶಾಸಕ ಡಾ ರಂಗನಾಥ್ ಸೇರಿದಂತೆ ಸುಮಾರು 2 ಸಾವಿರಕ್ಕಿಂತ ಹೆಚ್ಚು ಉದ್ಯೋಗಕಾಂಕ್ಷಿಗಳು ಭಾಗಿಯಾಗಿದ್ದರು. ಕಾರ್ಯಕ್ರಮದ ಕೊನೆಯ ಹಂತದಲ್ಲಿ ರಭಸವಾಗಿ ಬೀಸಿದ ಸುಂಟರಗಾಳಿಗೆ ಟೆಂಟ್ ಚೆಲ್ಲಾಪಿಲ್ಲಿಯಾಗಿದ್ದು, ಕೆಲ ಕಾಲ ಆತಂಕ ಸೃಷ್ಟಿಸಿತ್ತು.