ಗದಗ:– ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದ ಕೊಲೆ ಆರೋಪಿಗೆ ಗುಂಡೇಟು ಹೊಡೆದಿರುವ ಘಟನೆ ,ಗದಗ ಜಿಲ್ಲೆಯ ನರಗುಂದ ಬಳಿಯ ಕುರ್ಲಗೇರಿ ಬಳಿ ಜರುಗಿದೆ.
ಪಿಯುಸಿಯಲ್ಲಿ ಕಡಿಮೆ ಮಾರ್ಕ್ಸ್ ಬಂದಿದ್ದಕ್ಕೆ ತಾಯಿ-ಮಗಳ ಜಗಳ – ಪುತ್ರಿ ಸಾವು..!
ನಗರದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣದ ಆರೋಪಿಯೊಬ್ಬ ಸ್ಥಳ ಮಹಜರಿಗೆ ತೆರಳಿದ್ದ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದು, ಪೊಲೀಸರು ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ. ಸ್ಥಳ ಮಹಜರಿಗೆ ತೆರಳಿದ್ದ ವೇಳೆ ಎ-2 ಆರೋಪಿ ಫೈರೋಜ್ ಶಲವಡಿ-ನರಗುಂದ ಮಾರ್ಗ ಮಧ್ಯೆ ಮೂತ್ರ ವಿಸರ್ಜನೆ ನೆಪ ಹೇಳಿ ಜೀಪ್ ನಿಲ್ಲಿಸಲು ಹೇಳಿದ್ದಾನೆ. ಬಳಿಕ ಕೆಳಗಿಳಿದು ಸ್ಥಳದಲ್ಲಿದ್ದ ಬಾಟಲ್ ಒಂದನ್ನು ತೆಗೆದುಕೊಂಡು ಪಿಎಸ್ಐ ಶಿವಾನಂದ ಪಾಟೀಲ್ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಪೊಲಿಸರು ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ.
ಆರೋಪಿ ನರಗುಂದ ಬಳಿ ಮೊಬೈಲ್ ಎಸೆದು ಹೋಗಿದ್ದ. ಈ ಸಂಬಂಧ ಪೊಲೀಸರು ಆರೋಪಿಯನ್ನು ಸ್ಥಳ ಮಹಜರಿಗೆ ಕರೆದೊಯ್ದಿದ್ದಾಗ ಈ ಘಟನೆ ನಡೆದಿದೆ.