ಚಿಕ್ಕಬಳ್ಳಾಪುರ:- ನಗರದ ಚಾಮರಾಜಪೇಟೆ ವಾರ್ಡ್ನಲ್ಲಿ ಬಾಡಿಗೆ ರೂಮ್ನಲ್ಲಿ ಕತ್ತು ಕೊಯ್ದು ಮಹಿಳೆಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜರುಗಿದೆ.
40 ವರ್ಷದ ದೀಪಾ ಕೊಲೆಯಾದ ವಿವಾಹಿತ ಮಹಿಳೆಯಾಗಿದ್ದು, ತಮಿಳುನಾಡು ಮೂಲದ ಪ್ರಿಯಕರ ದಿವಾಕರ್ ಎಂಬಾತ ಕೊಲೆ ಮಾಡಿ ರೂಮ್ಗೆ ಬೀಗ ಹಾಕಿ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ.
ರೂಮ್ನಿಂದ ಕೆಟ್ಟ ವಾಸನೆ ಬರುತ್ತಿರುವ ಹಿನ್ನೆಲೆ ಅನುಮಾನಗೊಂಡ ಕಟ್ಟಡದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಆಗಮಿಸಿದ ಪೊಲೀಸರು ರೂಮ್ ಪರಿಶೀಲಿಸಿದಾಗ ಕೊಲೆ ಪ್ರಕರಣ ಬೆಳಕಿಗೆಬಂದಿದೆ. ಸ್ಥಳಕ್ಕೆ ಚಿಕ್ಕಬಳ್ಳಾಫುರ ಎಸ್ಪಿ ಡಿ.ಎಲ್.ನಾಗೇಶ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ರೂಮ್ ಮಾಲಿಕರಿಂದ ಮಾಹಿತಿ ಪಡೆದಿದ್ದಾರೆ.
ಮೃತ ದೀಪಾಳನ್ನು ಬಾಗೇಪಲ್ಲಿ ತಾಲೂಕಿನ ಜೂಲಪಾಳ್ಯಾಗೆ ಮದುವೆ ಮಾಡಿಕೊಡಲಾಗಿತ್ತು. ಮಕ್ಕಳ ಜೊತೆ ತವರು ಮನೆ ಚಿಕ್ಕಬಳ್ಳಾಫುರದಲ್ಲಿ ವಾಸವಿದ್ದ ದೀಪಾಳಿಗೆ ತನ್ನ ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದ ದೀವಾಕರ್ ಜೊತೆ ಅನೈತಿಕ ಸಂಬಂಧ ಇತ್ತು ಎನ್ನುವ ಆರೋಪ ಕೇಳಿಬಂದಿದೆ. ಆಗಾಗ ಪ್ರೀಯಕರ ದಿವಾಕರ್ ರೂಮಿಗೆ ಬಂದು ಹೋಗುತ್ತಿದ್ದಳು. ಇತ್ತೀಚೆಗೆ ರೂಮ್ಗೆ ಬಂದಿದ್ದಾಗ ಇಬ್ಬರ ನಡುವೆ ಜಗಳ ನಡೆದಿದ್ದು, ಈ ವೇಳೆ ದೀಪಾಳನ್ನು ದಿವಾಕರ್ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.