ಅವರೆಲ್ಲ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಹೊರಟಿದ್ರು. ಆದ್ರೆ ಮಾರ್ಗ ಮಧ್ಯೆ ಕಾದು ಕುಳಿತಿದ್ದ ಜವರಾಯನ ಅಟ್ಟಹಾಸಕ್ಕೆ, ಒಂದೆ ಕುಟುಂಬದ ಮೂವರು ಸೇರಿದಂತೆ ನಾಲ್ಕು ಜನರು ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಇತ್ತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ತಡರಾತ್ರಿ ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನಲ್ಲಿ ಭೀಕರ ರಸ್ತೆ ಅಪಘಾತ ನಡೆದಿದೆ. ನಗರದ ಹೊರವಲಯದ ಹಲಗೇರಿ ಕ್ರಾಸ್ ಬಳಿ ಪೂನಾ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರೊಂದು ಪಲ್ಟಿಯಾಗಿ ನಾಲ್ಕು ಜನರು ಸಾವನ್ನಪ್ಪಿದ್ದಾರೆ.
6 ಜನರು ಗಾಯಗೊಂಡಿದ್ದು ದಾವಣಗೇರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹಾವೇರಿ ಎರಡು ಕುಟುಂಬ ನಿನ್ನೆ ರಾತ್ರಿ ತಿರುಪತಿಗೆ ಪ್ರಯಾಣ ಬೆಳಸಿದ್ರು. ಅತಿ ವೇಗವಾಗಿ ಚಲಿಸುತ್ತಿದ್ದ ಇಟಿಗಾ ಕಾರು ಹೆದ್ದಾರಿ ಮಧ್ಯದ ಡಿವೈಡರಗೆ ಮೊದಲು ಡಿಕ್ಕಿ ಹೊಡೆದು ಬಳಿಕ ಹೆದ್ದಾರಿ ಪಕ್ಕದ ತಡೆಗೋಡೆಯನ್ನ ಛಿದ್ರಗೊಳಿಸಿ, ಸರ್ವಿಸ್ ರಸ್ತೆಯಲ್ಲಿ ಪಲ್ಟಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದಾರೆ.
ಹಾವೇರಿ ಬಸ್ ನಿಲ್ದಾಣದ ಮುಂದೆ ಪಡ್ ಮಾರಿ ಜೀವನ ಸಾಗಿಸುತ್ತಿದ್ದ ಸುರೇಶ, ಆತನ ಮಗಳು ಪವೀತ್ರಾ ಹಾಗೂ ಮೊಮ್ಮಗಳು ಚೈತನ್ಯ ಸೇರಿದಂತೆ ಸ್ನೇಹಿತನ ಮಗಳು ಐಶ್ವರ್ಯ ಸಾವನ್ನಪ್ಪಿದ್ದಾರೆ. ಐಶ್ವರ್ಯ ಹಾವೇರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕಲಿಯುತ್ತಿದ್ದಳು. ಚಾಲಕನ ಅತಿಯಾದ ವೇಗದಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ ಎಂದು ಹೇಳಲಾಗಿದೆ.
ಗಾಯಗೊಂಡ ಇಬ್ಬರ ಸ್ಥೀತಿ ಗಂಭೀರವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಡರಾತ್ರಿ ಒಂದು ಗಂಟೆಯ ಸಮಯದಲ್ಲಿ ಭೀಕರ ರಸ್ತೆ ಅಪಘಾತ ನಡೆದಿದೆ. ಮೃತನ ಕುಟುಂಬಸ್ಥರು ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದ್ದು, ರಾಣೇಬೆನ್ನೂರು ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.