ಹುಬ್ಬಳ್ಳಿ: ಕೇಂದ್ರದ ಬಜೆಟ್ ಜನಪರ ಕಾಳಜಿಯಿಂದ ಕೂಡಿದೆ ಎಂದು ಅರವಿಂದ್ ಬೆಲ್ಲದ್ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು, ಇಂದು ಕೇಂದ್ರ ವಿತ್ತ ಸಚಿವರಾದ ಸನ್ಮಾನ್ಯ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಬಜೆಟ್
ಜನಪರ ಕಾಳಜಿಯ ಬಜೆಟ್. ದೇಶದಲ್ಲಿ ಹಾಲು ಉತ್ಪಾದನಾ ಡೇರಿಗಳ ಸಂಖ್ಯೆ ಹೆಚ್ಚಳಕ್ಕೆ ಕ್ರಮ, ಪ್ರತ್ಯೇಕ ಮತ್ಸ ಸಂಪದ ಯೋಜನೆ ವಿಸ್ತರಣೆ ಸ್ವಾಗತಾರ್ಹ.
ರಾಜ್ಯದ ಪ್ರವಾಸೋದ್ಯಮಕ್ಕೆ ರಾಜ್ಯಗಳಿಗೆ ಬಡ್ಡಿ ರಹಿತ ಸಾಲ, ಸಣ್ಣ ನಗರಗಳಿಗೂ ಮೆಟ್ರೋ ವಿಸ್ತರಣೆ, 40 ಸಾವಿರ ರೈಲ್ವೆ ಕೋಚ್ ಬದಲಾವಣೆಗೆ ಕ್ರಮ,
ದೇಶದಲ್ಲಿ ಹಾಲು ಉತ್ಪಾದನಾ ಡೇರಿಗಳ ಸಂಖ್ಯೆ ಹೆಚ್ಚಳ,
ಬಾಡಿಗೆ ಮನೆಗಳು, ಕೊಳೆಗೇರಿಗಳಲ್ಲಿ ವಾಸಿಸುವ ಜನರಿಗೆ ಹೊಸ ಮನೆ ಖರೀದಿಗೆ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ನೆರವು ನೀಡವುದು ಬಡ ಮತ್ತು ಮಧ್ಯಮ ವರ್ಗದವರಿಗೆ ಅನುಕೂಲ. ಪಶುವೈದ್ಯಕೀಯ ಕಾಲೇಜುಗಳನ್ನು ತೆರೆಯಲು ಒತ್ತು, ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸುವ ತೀರ್ಮಾನ ಶ್ಲಾಘನೀಯ.
ಕೃಷಿ, ಕೈಗಾರಿಕೆ, ಶಿಕ್ಷಣ, ಆರೋಗ್ಯ ದಂತಹ ಕ್ಷೇತ್ರಗಳ ಆದ್ಯತೆಯ ವಲಯಗಳ ಸುಧಾರಣೆಗೆ ಒತ್ತು ನೀಡಿದ್ದು ಅಭಿವೃದ್ಧಿಗೆ ಪೂರಕ.
ಒಟ್ಟಾರೆ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಭಾರತದ ಮಹತ್ವದ ಹೆಜ್ಜೆ ಎಂದು ಅರವಿಂದ್ ಬೆಲ್ಲದ್ ಹೇಳಿದ್ದಾರೆ.