ಅಥಣಿ :ಪ್ರವಾಹ ಸಂತ್ರಸ್ತರ ಸಮಸ್ಯೆ ಕುರಿತು ಅಧಿಕಾರಿಗಳ ಜೊತೆ ಸಭೆ ನಡೆಸಿದ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ಅಧಿಕಾರಿಗಳಿಗೆ ನೆರೆ ಸಮಸ್ಯೆ ಕುರಿತು ಸಮಗ್ರ ವರದಿ ಸಲ್ಲಿಸಿ ಮೂಲಭೂತ ಸೌಕರ್ಯಗಳ ಕುರಿತು ಕಾಳಜಿ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಿಎಂ ಬದಲಾವಣೆ ವಿಚಾರವಾಗಿ ಮಾತನಾಡಿದ ಸಚಿವ ಸತೀಶ ಜಾರಕಿಹೊಳಿ ಸಿಎಂ ಬದಲಾವಣೆ ವಿಚಾರ ಇಗ್ಯಾಕೆ ಅವರು ಏನು ತಪ್ಪು ಮಾಡಿಲ್ಲ ಸಿಎಂ ಬದಲಾವಣೆ ವಿಚಾರ ಯಾರು ಪ್ರಸ್ಥಾಪಿಸಬಾರದು. ಅವರು ಸಿಎಂ ಆಗಿ ಇರುತ್ತಾರೆ ಎಂದು ಪರೋಕ್ಷವಾಗಿ ಸಿಎಂ ಸಿದ್ದರಾಮಯ್ಯ ಪರ ಬ್ಯಾಟ್ ಬಿಸಿದರು.