ಬಳ್ಳಾರಿ: ಪ್ರೀತಿಸಿ ಮದುವೆಯಾದ ಜೋಡಿ ಹಕ್ಕಿಗೆ ಸ್ವ ಕುಟುಂಬದಿಂದಲೇ ಜೀವ ಬೆದರಿಕೆ ಎಂದು ಪ್ರಾಣ ರಕ್ಷಣೆಗಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಹೌದು ಈ ಜೋಡಿ ಹೆಸರು ನಾರಾಯಣ (25) ಮತ್ತು ಶಿಲ್ಪಾ (20) ಅಂತಾ ಯುವಕ ನಾರಾಯಣ ಬಳ್ಳಾರಿ ತಾಲೂಕಿನ ಗೋನಾಳ ಗ್ರಾಮದವನಾದ್ರೆ, ಯುವತಿ ಶಿಲ್ಪಾ ಸಿರಗುಪ್ಪ ತಾಲೂಕಿನ ಊಳೂರು ಗ್ರಾಮದವಳು.. ಶಿಲ್ಪಾ 9 ನೇ ತರಗತಿ ಇರುವಾಗ ಗೋನಾಳ ಗ್ರಾಮದಲ್ಲಿರುವ ಅವಳ ದೊಡ್ಡಮ್ಮನ ಮನೆಗೆ ಬಂದಿದ್ದಳಂತೆ ಆಗ ನಾರಾಯಣನ ಪರಿಚಯವಾಗಿದೆ..
ಪರಿಚಯ ಪ್ರೇಮಕ್ಕೆ ತಿರುಗಿ ಈಗ ಈ ಜೋಡಿ ಮದುವೆ ಆಗಿದ್ದಾರೆ.. ಯುವಕ ಯುವತಿ ಕುರುಬ ಸಮುದಾಯಕ್ಕೆ ಸೇರಿದ್ದಾರೆ ಯಾವುದೇ ಜಾತಿ ಸಮಸ್ಯೆ ಇಲ್ಲ ಆದರೂ ಮನೆಯಲ್ಲಿ ಒಪ್ಪಿಲ್ಲ ಹೀಗಾಗಿ ಶಿಲ್ಪಾ ಮನೆ ಬಿಟ್ಟು ಬಂದು ಈ ಯುವಕನನ್ನ ಮದುವೆ ಆಗಿದ್ದಾಳೆ. ಹುಡುಗನ ಮನೆಯಲ್ಲಿ ಶಿಲ್ಪಾಳನ್ನ ಸೊಸೆ ಅಂತಾ ಒಪ್ಪಿಕೊಳ್ಳಲು ತಯಾರಿದ್ದಾರೆ.
ಆದರೆ ಯುವತಿ ಮನೆಯಲ್ಲಿ ನಾರಾಯಣನನ್ನ ಅಳಿಯ ಅಂತಾ ಒಪ್ಪಿಕೊಳ್ಳುತ್ತಿಲ್ಲ.. ಹೀಗಾಗಿ ಹುಡುಗಿ ಪೋಷಕರಿಂದ ಏನಾದರೂ ಅನಾಹುತ ಆಗ ಬಹುದು ಅಂತಾ ರಕ್ಷಣೆಗಾಗಿ ಎಸ್ಪಿ ಕಚೇರಿಗೆ ಬಂದಿದ್ದಾರೆ. ಒಟ್ಟಿನಲ್ಲಿ ಐದು ವರ್ಷದಿಂದ ಪ್ರೀತಿ ಪ್ರೇಮದಲ್ಲಿ ಮುಳಗಿದ್ದ ಜೋಡಿ ಮದುವೆ ಆಗಿದ್ದಾರೆ.. ಆದರೆ ಈ ಮದುವೆಗೆ ಹುಡುಗಿ ಪೋಷಕರು ಒಪ್ಪಿಗೆ ನೀಡಿಲ್ಲ.. ಹೀಗಾಗಿ ರಕ್ಷಣೆ ಬೇಕು ಅಂತಾ ಠಾಣೆ ಮೆಟ್ಟಿಲೇರಿದ್ದಾರೆ..