ಬೆಂಗಳೂರು ಗ್ರಾಮಾಂತರ:– ಚುನಾವಣಾ ಕರ್ತವ್ಯಕ್ಕೆ ಹಾಜರಾಗಿದ್ದ ಶಿಕ್ಷಕಿಯೊಬ್ಬರು ಸಾವನ್ನಪ್ಪಿದ ಘಟನೆ ಜಿಲ್ಲೆಯ ದೊಡ್ಡಬಳ್ಳಾಪುರ ಹೊರವಲಯದ ರೋಜಿಪುರ ಮತಗಟ್ಟೆ 155 ರಲ್ಲಿ ಜರುಗಿದೆ.
ನಿಮ್ಮ ಬಿಳಿ ಕೂದಲು ಕಪ್ಪಾಗಲು ಈ ಮನೆ ಮದ್ದು ಟ್ರೈ ಮಾಡಿ…!
ಕವಿತಾ ( 35 ) ಮೃತ ಶಿಕ್ಷಕಿ ಎನ್ನಲಾಗಿದೆ. ಕರ್ತವ್ಯದಲ್ಲಿರುವಾಗ ಸಂಜೆ ಶಾಲೆಯಲ್ಲಿ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದರು. ಕೂಡಲೇ ಸಿಬ್ಬಂದಿಗಳು ಅವರನ್ನು ಆಸ್ವತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದರು. ಆದರೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಶಿಕ್ಷಕಿಯ ನಿಧನಕ್ಕೆ ಸಹದ್ಯೋಗಿಗಳು ಕಂಬನಿ ಮಿಡಿಯುತ್ತಿದ್ದಾರೆ. ಇನ್ನು ಲೋ ಬಿಪಿಯಿಂದ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೊಟ್ಟೆಪ್ಪನಹಳ್ಳಿ ಮತಗಟ್ಟೆಯಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಮಹಿಳಾ ಸಿಬ್ಬಂದಿ ಮೃತಪಟ್ಟಿದ್ದರು. ಚಳ್ಳಕೆರೆ ಪಟ್ಟಣದ ವಿಠಲ ನಗರದ ಯಶೋಧಮ್ಮ (55) ಮೃತ ಮಹಿಳಾ ಸಿಬ್ಬಂದಿ. ಯಶೋದಮ್ಮ ಅವರು ಲೋ ಬಿಪಿಯಿಂದಾಗಿ ಅಸ್ವಸ್ಥಗೊಂಡಿದ್ದರು. ಇವರನ್ನು ಕೂಡಲೆ ಚಳ್ಳಕೆರೆ ಆಸ್ಪತ್ರೆಗೆ ಕರೆತರುವಷ್ಟರಲ್ಲಿ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದರು. ಚಳ್ಳಕೆರೆ ಆಸ್ಪತ್ರೆಗೆ ಅಪರ ಜಿಲ್ಲಾಧಿಕಾರಿ ಕುಮಾರಸ್ವಾಮಿ ಭೇಟಿ ನೀಡಿದ್ದರು