ಕೋಲ್ಕತ್ತಾ:- ವೈದ್ಯೆಯ ಮೇಲೆ ಅತ್ಯಾಚಾರಗೈದು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ರೇಣುಕಾಸ್ವಾಮಿ ಕೊಲೆ ಕೇಸ್: ದರ್ಶನ್ & ಗ್ಯಾಂಗ್ ಗೆ ಜಾಮೀನು ಸಿಗದಂತೆ ಮಾಡಲು ಖಾಕಿ ತಯಾರಿ!
ಕೋಲ್ಕತ್ತಾದಲ್ಲಿ ನಡೆದ ಮಹಿಳಾ ಸ್ನಾತಕೋತ್ತರ ತರಬೇತಿ ವೈದ್ಯೆ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಸಂಜಯ್ ರಾಯ್ನನ್ನು ಪ್ರಮುಖ ಸಾಕ್ಷ್ಯಾಧಾರದ ಆಧಾರದ ಮೇಲೆ ಕೆಲವೇ ಗಂಟೆಗಳಲ್ಲಿ ಪೊಲೀಸರು ಬಂಧಿಸಿದ್ದು, ಪೊಲೀಸರು ಈ ಪ್ರಕರಣವನ್ನು ಬ್ಲೂಟೂತ್ ಹೆಡ್ಫೋನ್ ಸಾಕ್ಷ್ಯದ ಮೂಲಕ ಭೇದಿಸಿದ್ದು, ಆರೋಪಿ ತನ್ನ ಬ್ಲೂಟೂತ್ಅನ್ನು ಕೃತ್ಯ ಎಸಗಿದ ಸ್ಥಳದಲ್ಲೇ ಬಿಟ್ಟು ಹೋಗಿದ್ದರಿಂದ ಅದು ಆತನಿಗೆ ಮುಳುವಾಗಿ ಪರಿಣಮಿಸಿದೆ.
ಶುಕ್ರವಾರ ಬೆಳಿಗ್ಗೆ, ಕೋಲ್ಕತ್ತಾದ ಸರ್ಕಾರಿ ಆರ್ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸೆಮಿನಾರ್ ಹಾಲ್ನಲ್ಲಿ ಮಹಿಳಾ ಸ್ನಾತಕೋತ್ತರ ತರಬೇತಿ ಯುವ ವೈದ್ಯೆಯ ಅರೆ ನಗ್ನ ಶವ ಪತ್ತೆಯಾಗಿತ್ತು. ಎದೆಯ ಔಷಧ ವಿಭಾಗದಲ್ಲಿ ದ್ವಿತೀಯ ವರ್ಷದ ವಿದ್ಯಾರ್ಥಿನಿಯಾಗಿದ್ದ ಮೃತ ವಿದ್ಯಾರ್ಥಿನಿಯ ಕೊಲೆಗೂ ಮುನ್ನ ಆಕೆಯ ಮೇಲೆ ಅತ್ಯಾಚಾರ ಎಸಗಲಾಗಿದೆ ಮತ್ತು ನಂತರ ಆಸ್ಪತ್ರೆಯೊಳಗೆ ಕೊಲೆ ಮಾಡಲಾಗಿದೆ.
ವೈದ್ಯಕೀಯ ವಿದ್ಯಾರ್ಥಿನಿಯ ಮೃತದೇಹವು ರಕ್ತದ ಕಲೆಗಳ ಸಹಿತ ಹಾಸಿಗೆಯ ಮೇಲೆ ಬಿದ್ದಿರುವುದು ಪತ್ತೆಯಾಗಿತ್ತು. ಜೊತೆಗೆ ಆಕೆಯ ಕಣ್ಣು ಮತ್ತು ಬಾಯಿಯಿಂದ ರಕ್ತ ಹರಿಯುತ್ತಿತ್ತು. ಘಟನೆ ಬೆಳಕಿಗೆ ಬಂದ ಬಳಿಕ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಮರಣೋತ್ತರ ಪರೀಕ್ಷೆ ನಡೆಸಿದಾಗ ಮಹಿಳಾ ವೈದ್ಯೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದು ವರದಿಯಲ್ಲಿ ಬಹಿರಂಗವಾಗಿದೆ.