ಬಾಗಲಕೋಟೆ:- ಬಿಎಸ್ ವೈ ಹೆಸರಲ್ಲಿ ನಡೆಯುವ ಉತ್ಸವ ಶಕ್ತಿ ಪ್ರದರ್ಶನವಲ್ಲ, ಗುಂಪುಗಾರಿಕೆ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು, ಬಿಜೆಪಿ ಸಂಘಟನೆ ಉಳಿಯತ್ತದೆ ಮತ್ತೆ ಬಿಜೆಪಿ ಮತ್ತಷ್ಟು ಗಟ್ಟಿಯಾಗುತ್ತದೆ. ಪ್ರತಿ ವರ್ಷವೂ ಯಡಿಯೂರಪ್ಪನವರ ಹುಟ್ಟು ಹಬ್ಬ ಆಚರಣೆಗೆ ಮಾಡದ ಸಮಾವೇಶ ಈಗ ಯಾಕೆ ಎಂದು ಪ್ರಶ್ನಿಸಿದರು. ಹೀಗೆ ಗುಂಪುಗಾರಿಕೆ ನಡೆಯುವ ಕೆಲಸವನ್ನು ಯಡಿಯೂರಪ್ಪ ನಿಲ್ಲಿಸಬೇಕು ಎಂದರು.
ಬಿಜೆಪಿಯಲ್ಲಿ ಇರುವ ಗುಂಪುಗಾರಿಕೆ ಮುಂದೆ ಸರಿ ಹೋಗುತ್ತದೆ. ಈಗ ಯಾರ್ಯಾರು ಏನು ಬೇಕಾದ್ರೂ ಹಾರಾಡಬಹುದು. ಬಿಜೆಪಿ ಪಕ್ಷಕ್ಕಾಗಿ ತಪಸ್ಸು ಮಾಡಿ ಕಟ್ಟಿದವರಿಗೆ ಬೆಲೆ ಇದೆ. ಬಿಜೆಪಿಯಲ್ಲಿ ಗುಂಪುಗಾರಿಕೆ ನಡೆಯುವುದಿಲ್ಲ. ವರಿಷ್ಠರು ಅದನ್ನು ಸರಿಯಾಗಿ ಚಿವುಟಿ ಹಾಕುತ್ತಾರೆ ಎಂದು ಹೇಳಿದರು.