ಮಂಡ್ಯ: ಮಂಡ್ಯದಲ್ಲಿ ಆಸ್ತಿ ವಿಚಾರಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಸುಂಡಹಳ್ಳಿ ಗ್ರಾಮದಲ್ಲಿ ಮಗನೇ ತಂದೆಯನ್ನು ಕೊಲೆಗೈದಿದ್ದಾನೆ. ಮಗ ಮಹದೇವ್ ತಲೆ ಮೇಲೆ ಕಲ್ಲು ಎತ್ತುಹಾಕಿ ತಂದೆ ನಂಜಪ್ಪನನ್ನು ಭೀಕರವಾಗಿ ಹತ್ಯೆ ಮಾಡಿದ್ದಾನೆ.
ಕೊಲೆಯಾದ ನಂಜಪ್ಪ ಆಸ್ತಿಯನ್ನು ಮಗಳ ಹೆಸರಿಗೆ ಬರೆದುಕೊಟ್ಟಿದ್ದ. ಆಸ್ತಿ ಕೊಡಲಿಲ್ಲ ಎಂಬ ಕಾರಣಕ್ಕೆ ಮಗ ಮಹದೇವ್ ಈ ಕೃತ್ಯವೆಸಗಿದ್ದಾನೆ.
![Demo](https://ainlivenews.com/wp-content/uploads/2023/12/spoorthi-1.jpg)
![](https://ainlivenews.com/wp-content/uploads/2024/01/Ad-Banner-copy-scaled.jpg)