ಬೆಂಗಳೂರು:- ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳೂ ಸೇರಿ ದೇಶದಾದ್ಯ ಇಂದು ಲೋಕಸಭಾ ಚುನಾವಣೆ ನಡೆಯುತ್ತಿದೆ. ಎರಡನೇ ಹಂತದಲ್ಲಿ ಒಟ್ಟು 13 ರಾಜ್ಯಗಳ 89 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ.
Lokasabha Election: ಗೋವಿಂದರಾಜನಗರದಲ್ಲಿ ಮತದಾನ ಮಾಡಿದ ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ!
ಕರ್ನಾಟಕ ಮಾತ್ರವಲ್ಲದೇ ಒಟ್ಟು 13 ರಾಜ್ಯಗಳ 88 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ಆರಂಭವಾಗಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಣಕ್ಕೆ ಇಳಿದಿರುವ ವಯನಾಡಿನಲ್ಲಿ ವೋಟಿಂಗ್ ನಡೆಯುತ್ತಿದೆ. ಜೊತೆಗೆ ಕೇರಳದ ತಿರುವನಂತಪುರಂ ಕ್ಷೇತ್ರದಿಂದ ಕಾಂಗ್ರೆಸ್ ಹಾಲಿ ಸಂಸದ ಶಶಿ ತರೂರ್ ಅಖಾಡದಲ್ಲಿದ್ದಾರೆ. ಅವರ ವಿರುದ್ಧ ಕೇಂದ್ರದ ಹಾಲಿ ಸಚಿವ ರಾಜೀವ್ ಚಂದ್ರಶೇಖರ್ ಇದ್ದಾರೆ.
ಲೋಕಸಭಾ ಚುನಾವಣೆಯ ಮತದಾನದ ಸಂದರ್ಭ ಅಕ್ರಮವಾಗಿ ಜನರನ್ನು ಕೇರಳಕ್ಕೆ ಕಳುಹಿಸುತ್ತಿದ್ದ ಆರೋಪದಲ್ಲಿ ಕೇರಳಕ್ಕೆ ತೆರಳುತ್ತಿದ್ದ 15 ಬಸ್ಗಳನ್ನು ಬಿಜೆಪಿ, ಭಜರಂಗದಳ ಕಾರ್ಯಕರ್ತರು ತಡೆದು ನಿಲ್ಲಿಸಿದ್ದಾರೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಘಟನೆ ನಡೆದಿದೆ. ಕೂಡಲೇ ಸ್ಥಳಕ್ಕೆ ಬಂದ ಚುನಾವಣಾ ಅಧಿಕಾರಿಗಳು 5 ಬಸ್ ಗಳನ್ನು ಜಪ್ತಿ ಮಾಡಿದ್ದಾರೆ.
ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನಕ್ಕೆ ಅವಕಾಶವಿದೆ. ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಸೆಂಟ್ರಲ್, ಬೆಂಗಳೂರು ಗ್ರಾಮಾಂತರ, ಮೈಸೂರು-ಕೊಡಗು, ಚಾಮರಾಜನಗರ, ಮಂಡ್ಯ, ತುಮಕೂರು, ಕೋಲಾರ, ಹಾಸನ, ಉಡುಪಿ-ಚಿಕ್ಕಮಗಳೂರು ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ಚಿತ್ರದುರ್ಗ ಕ್ಷೇತ್ರಗಳಲ್ಲಿ ಮತದಾನ ಆರಂಭವಾಗಿದೆ.
ಇನ್ನೂ ಎಲ್ಲರೂ ಬಂದು ಮತದಾನ ಮಾಡಬೇಕು ಎಂದು ರಾಜ್ಯಸಭಾ ಸದಸ್ಯೆ ಸುಧಾಮೂರ್ತಿ ಕರೆ ನೀಡಿದರು. ಬೆಂಗಳೂರಿನ ಜಯನಗರದ ಬಿಇಎಸ್ ಕಾಲೇಜಿನಲ್ಲಿ ಮತದಾನ ಮಾಡಿದ ಅವರು, ಹೆಚ್ಚಿನ ಸಂಖ್ಯೆಯಲ್ಲಿ ಬಂದು ಜನ ಮತದಾನ ಮಾಡಬೇಕು. ಮುಖ್ಯವಾಗಿ ಯುವಕ, ಯುವತಿಯರು ಮತದಾನ ಮಾಡಬೇಕು ಎಂದು ಹೇಳಿದರು.