ಮಂಗಳೂರು:- ಬಾವಿಗೆ ಬಿದ್ದಿದ್ದ, ಬಲು ಅಪರೂಪದ ಕರಿ ಚಿರತೆಯನ್ನು ಅರಣ್ಯ ಇಲಾಖೆ ಸ್ಥಳೀಯರ ಸಹಕಾರದಲ್ಲಿ ಬಾವಿಯಿಂದ ಮೇಲೆತ್ತಿ ರಕ್ಷಿಸಿದ್ದಾರೆ.
ಮಂಗಳೂರು ತಾಲೂಕಿನ ಎಡಪದವು ಸಮೀಪದ ಗೊಸ್ಪೆಲ್ ಸನಿಲ ಎಂಬಲ್ಲಿ ಜರುಗಿದೆ.
ಸನಿಲ ನಿವಾಸಿ ಶಕುಂತಲಾ ಆಚಾರ್ಯ ಎಂಬವರ ಮನೆಯ ಬಾವಿಯಲ್ಲಿ ಇಂದು ಬೆಳಿಗ್ಗೆ ಚಿರತೆ ಪತ್ತೆಯಾಗಿತ್ತು. ಶಕುಂತಲಾ ಅವರ ಪತಿ ನೀರು ತರಲು ಹೋದಾಗ ಬಾವಿಯಲ್ಲಿ ಚಿರತೆ ಕಂಡು ಸ್ಥಳೀಯರಿಗೆ ಮತ್ತು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದಾವಿಸಿದ ಅರಣ್ಯ ಇಲಾಖೆ, ವಲಯ ಅರಣ್ಯಾಧಿಕಾರಿ ರಾಜೇಶ್ ಬಳಿಗಾರ್ ನೇತೃತ್ವದಲ್ಲಿ ತಂಡ ಸ್ಥಳೀಯರ ಸಹಾಯದೊಂದಿಗೆ ಕರಿಚಿರತೆಯನ್ನು ಬೋನಿನ ಮೂಲಕ ಬಾವಿಯಿಂದ ಮೇಲೆತ್ತುವ ಕಾರ್ಯಾಚರಣೆ ನಡೆಸಿದ್ದರು. ಕರಿಚಿರತೆ ಬಲು ಅಪರೂಪದ ಚಿರತೆಯಾಗಿದ್ದು ಪಶು ವೈದ್ಯರಿಂದ ಆರೋಗ್ಯ ತಪಾಸಣೆ ಬಳಿಕ ಅವರ ಸಲಹೆಯಂತೆ ಮುಂದಿನ ಕೃಮ ಕೈಗೊಳ್ಳಲಾಗುವುದು. ಈ ಭಾಗದಲ್ಲಿ ಚಿರತೆ ಇರುವ ಬಗ್ಗೆ ಮೊದಲಿನಿಂದಲೂ ದೂರುಗಳು ಬಂದಿದ್ದವು ಇದೀಗ ಸ್ಥಳೀಯರ ಸಹಕಾರದಲ್ಲಿ ಚಿರತೆಯನ್ನು ರಕ್ಷಿಸಲಾಗಿದೆ