ಬೆಂಗಳೂರು: ಸೀರೆಯಿಂದ ಕುತ್ತಿಗೆ ಬಿಗಿದು ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆಯಾಗಿರುವ ಘಟನೆ ಬೆಂಗಳೂರಿನ ಕಾಮಾಕ್ಷಿ ಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನೇತ್ರಾವತಿ ಪತಿಯಿಂದ ಹತ್ಯೆಯಾದ ದುರ್ದೈವಿಯಾಗಿದ್ದು, ವೆಂಕಟೇಶ್ ಕೊಲೆ ಆರೋಪಿ ಆಗಿದ್ದಾನೆ. ಪತ್ನಿ ನೇತ್ರಾವತಿಯನ್ನು ಸೀರೆಯಿಂದ ಆಕೆಯ ಕುತ್ತಿಗೆ ಬಿಗಿದು ವೆಂಕಟೇಶ್ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.ನಿನ್ನೆ ಶನಿವಾರ ರಾತ್ರಿ ಹತ್ಯೆ ಮಾಡಿ ಎಸ್ಕೇಪ್ ಆಗಿದ್ದಾನೆ.
PUC ಪಾಸಾದವರಿಗೆ ಉದ್ಯೋಗವಕಾಶ! ಪರೀಕ್ಷೆ ಇಲ್ಲದೆ ನೇರ ನೇಮಕಾತಿ – ತಿಂಗಳಿಗೆ ₹63,000 ಸಂಬಳ.!
ಬೆಳಗ್ಗೆ ಪಕ್ಕದ ಮನೆಯವರು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಕೂಡಲೇ ಕಾಮಾಕ್ಷಿ ಪಾಳ್ಯ ಪೊಲೀ ಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಪಡೆದು ಸ್ಥಳಕ್ಕಾಗಮಿಸಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ. ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.