ಹಾಸನ:- ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ತ ವಿದೇಶದಲ್ಲಿ ಪುತ್ರ ಪ್ರಜ್ವಲ್ ತಲೆಮರೆಸಿಕೊಂಡಿದ್ದರೆ, ಇತ್ತ ಮಹಿಳೆ ಕಿಡ್ನ್ಯಾಪ್ ಕೇಸಲ್ಲಿ ಗಂಡ ರೇವಣ್ಣ ಜೈಲು ಪಾಲಾಗಿದ್ದಾರೆ. ಇವೆಲ್ಲವನ್ನೂ ನೋಡುತ್ತಿರುವ ಭವಾನಿ ರೇವಣ್ಣ ಸೊರಗಿ ಹೋಗಿದ್ದಾರೆ.
ವಿದ್ಯುತ್ ಬಿಲ್ ವಿವಾದ: ಮಾಲೀಕನನ್ನೇ ಕೊಂದ ವ್ಯಕ್ತಿ..!
ಹೀಗಾಗಿ ಜೆಡಿಎಸ್ ನಾಯಕರು ಭವಾನಿಯವರಿಗೆ ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದಾರೆ. ಮಾಜಿ ಶಾಸಕ ಮತ್ತು ಜಿಲ್ಲಾ ಜೆಡಿಎಸ್ ಅಧ್ಯಕ್ಷ ಕೆಎಸ್ ಲಿಂಗೇಶ್ ಮತ್ತು ಶ್ರವಣಬೆಳಗೊಳ ಶಾಸಕ ಸಿಎನ್ ಬಾಲಕೃಷ್ಣ ಇಂದು ಹೊಳೆನರಸೀಪುರದಲ್ಲಿರುವ ಹೆಚ್ ಡಿ ರೇವಣ್ಣ ಮನೆಗೆ ಭೇಟಿ ನೀಡಿ ಭವಾನಿ ಅವರಿಗೆ ಸಾಂತ್ವನ ಹೇಳಿದರು. ರೇವಣ್ಣ ಅವರನ್ನು ನ್ಯಾಯಾಲಯವು 4 ದಿನಗಳ ಕಾಲ ಎಸ್ಐಟಿ ಕಸ್ಟಡಿಗೆ ಒಪ್ಪಿಸಿದೆ ಮತ್ತು ಪ್ರಜ್ವಲ್ ರೇವಣ್ಣ ಯಾವಾಗ ಭಾರತಕ್ಕೆ ಹಿಂತಿರುಗಲಿದ್ದಾರೆ ಅನ್ನೋದು ಇನ್ನೂ ಖಚಿತಪಟ್ಟಿಲ್ಲ. ಪ್ರಜ್ವಲ್ ಬೆಂಗಳೂರಲ್ಲಿ ಲ್ಯಾಂಡ್ ಆದ ತಕ್ಷಣ ಎಸ್ಐಟಿ ಅವರನ್ನೂ ಬಂಧಿಸಲಿದೆ ಎನ್ನಲಾಗಿದೆ.