ಚಿತ್ರದುರ್ಗ:- ಜಿಲ್ಲೆ ಚಳ್ಳಕೆರೆ ತಾಲೂಕಿನ ಪರಶುರಾಂಪುರದಲ್ಲಿ ನಿಧಿ ಆಸೆಗಾಗಿ ಚಪ್ಪಲಿ ಹೊಲೆಯುವನನ್ನು ಕರೆದೊಯ್ದು ಖದೀಮರು ಬಲಿ ಕೊಟ್ಟಿರುವ ಘಟನೆ ಜರುಗಿದೆ.
ರಾಜ್ಯದಲ್ಲಿ ಪ್ರಾಮಾಣಿಕ ಅಧಿಕಾರಿಗಳಿಗೆ ಕವಡೆ ಕಾಸಿನ ಬೆಲೆ ಇಲ್ಲ: ಎನ್.ರವಿಕುಮಾರ್!
ಪ್ರಭಾಕರ್ ಹತ್ಯೆಯಾದ ವ್ಯಕ್ತಿ ಎಂದು ಹೇಳಲಾಗಿದೆ. ಜ್ಯೋತಿಷಿ ರಾಮಕೃಷ್ಣನ ಮಾತು ಕೇಳಿ ಆನಂದ್ ರೆಡ್ಡಿ ಎಂಬಾತ ಹಿಂದೆ ಮುಂದೆ ನೋಡದೇ ನರಬಲಿ ಕೊಟ್ಟೇ ಬಿಟ್ಟಿದ್ದಾನೆ. ಆದ್ರೆ, ಇದೀಗ ಪೊಲೀಸರು, ನರಬಲಿ ಕೊಟ್ಟ ಆರೋಪಿ ಆಂಧ್ರದ ಕಲ್ಯಾಣ ದುರ್ಗ ತಾಲೂಕಿನ ಕುಂದುರ್ಪಿ ಗ್ರಾಮದ ಆನಂದ ರೆಡ್ಡಿ ಹಾಗೂ ಜ್ಯೋತಿಷಿಯನ್ನು ಬಂಧಿಸಿದ್ದಾರೆ.
ಜ್ಯೋತಿಷಿ ರಾಮಕೃಷ್ಣ, ಆನಂದ ರೆಡ್ಡಿಗೆ ಪರಶುರಾಮಪುರ ಪಶ್ಚಿಮದಲ್ಲಿ ನರಬಲಿ ಕೊಟ್ರೆ ನಿಧಿ ಸಿಗುತ್ತೆ. ಆ ರಕ್ತವನ್ನು ಮಾರಮ್ಮ ದೇವಿಗೆ ಅರ್ಪಿಸಲು ಹೇಳಿದ್ದನಂತೆ. ಜ್ಯೋತಿಷಿ ಮಾತು ಕೇಳಿದ ಆನಂದ ರೆಡ್ಡಿ, ಕಳೆದ ಭಾನುವಾರ ಸಂಜೆ ಪಶ್ಚಿಮ ದಿಕ್ಕಲ್ಲಿ ಬಂದ ಪ್ರಭಾಕರನ ಬರ್ಬರ ಹತ್ಯೆ ಮಾಡಿದ್ದಾನೆ. ಬಸ್ ನಿಲ್ದಾಣದಲ್ಲಿ ಚಪ್ಪಲಿ ಹೊಲೆಯುವ ಕಾಯಕ ಮಾಡಿಕೊಂಡಿದ್ದ ಪ್ರಭಾಕರನನ್ನು ಬೈಕಲ್ಲಿ ಡ್ರಾಪ್ ನೀಡುವುದಾಗಿ ಹೇಳಿ ಕರೆದೊಯ್ದು ಮಚ್ಚಿನಿಂದ ಕೊಚ್ಚಿ ಕೊಂದಿದ್ದಾನೆ.
ಕೊಲೆ ಆರೋಪಿ ಆನಂದ ರೆಡ್ಡಿ ಪಾವಗಡದ ಡಾಬಾಲ್ಲಿ ಭಟ್ಟನಾಗಿ ಕೆಲಸ ಮಾಡುತ್ತಿದ್ದ. ಎರಡು ದಿನಗಳ ಹಿಂದೆ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದ್ದು, ಕೊಲೆ ಆರೋಪಿ ಆನಂದ ರೆಡ್ಡಿ ಹಾಗೂ ತುಮಕೂರು ಜಿಲ್ಲೆಯ ಪಾವಗಡದ ಜ್ಯೋತಿಷಿ ರಾಮಕೃಷ್ಣನನ್ನು ಬಂಧಿಸಿ ಕೊಲೆಗೆ ಬಳಸಿದ್ದ ಮಚ್ಚು ಹಾಗೂ ಬಟ್ಟೆ ಸೀಜ್ ಮಾಡಿದ್ದಾರೆ.