ತುಮಕೂರು (ಏಪ್ರಿಲ್ 23):- ಕೇಂದ್ರದಲ್ಲಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರ ವಹಿಸಿಕೊಂಡ ನಂತರ ದೇಶದ ಬಡವರನ್ನು ಮತ್ತಷ್ಟು ಹಸಿವುನಿಂದ ಬಳಲುತ್ತಿದ್ದಾರೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಆರೋಪಿಸಿದರು.
ಬರಗಾಲ ಬಂದರೆ ಹಣ ಮಾಡಲು ಕಾಂಗ್ರೆಸ್ಸಿಗರಿಗೆ ಸುವರ್ಣಕಾಲ-ಹೆಚ್.ಡಿ.ಕುಮಾರಸ್ವಾಮಿ
ಯಲ್ಲಾಪುರದಲ್ಲಿ ನಡೆದ ಲೋಕಸಭಾ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, 2014ರಲ್ಲಿ ಜಾಗತಿಕ ಹಸಿವಿನ ಸೂಚ್ಯಂಕದಲ್ಲಿ ಭಾರತ 55ನೇ ಸ್ಥಾನದಲ್ಲಿತ್ತು. ಪ್ರಸ್ತುತ 111ನೇ ಸ್ಥಾನದಲ್ಲಿದೆ. ಬಡವರನ್ನು ಮತ್ತಷ್ಟು ಹಸಿವಿನ ಕೂಪಕ್ಕೆ ತಳ್ಳುತ್ತಿರುವುದು ನೈಜ ಉದಾಹರಣೆಯಾಗಿದೆ ಎಂದು ಕೇಂದ್ರದ ವಿರುದ್ಧ ಹರಿಹಾಯ್ದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಷ್ಟ್ರಮಟ್ಟದ ಸಮಸ್ಯೆಗಳನ್ನು ಅರ್ಥೈಸಿಕೊಂಡವರು. ಬಡವರ, ಹಿಂದುಳಿದವರ, ದಲಿತರ ಪರವಾಗಿ ಅವರನ್ನು ಮೇಲೆತ್ತುವ ಕೆಲಸ ಮಾಡುತ್ತಿದ್ದಾರೆ. ಬಡವರ ಹಸಿವು ನೀಗಿಸುವ ನಿಟ್ಟಿನಲ್ಲಿ ಮಹತ್ವಕಾಂಕ್ಷಿ ಅನ್ನಭಾಗ್ಯ ಯೋಜನೆಯನ್ನು ನೀಡಿದ್ದಾರೆ ಎಂದು ಹೇಳಿದರು.
ಡಾ. ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ಒಕ್ಕೂಟದ ವ್ಯವಸ್ಥೆಯನ್ನು ಕೊಟ್ಟಿದ್ದಾರೆ. ರಾಜ್ಯದ 224 ತಾಲ್ಲೂಕುಗಳಲಿ ತೀವ್ರ ಬರಗಾಲವಿದೆ. ರಾಜ್ಯಕ್ಕೆ ರೂ. 18 ಸಾವಿರ ಕೋಟಿ ಬರ ಪರಿಹಾರ ನೀಡುವಂತೆ ಡಿಸೆಂಬರ್ನಲ್ಲಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದರು ಕಿವಿಗೊಡಲಿಲ್ಲ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಕೃಷ್ಣಭೈರೇಗೌಡ ಸೇರಿದಂತೆ ಹಲವರು ಕೇಂದ್ರಕ್ಕೆ ಮನವಿ ಸಲ್ಲಿಸಿದರು, ಬರ ಪರಿಹಾರ ನೀಡಲಿಲ್ಲ. ಇಡೀ ರಾಜ್ಯ ಸರ್ಕಾರವೇ ದೆಹಲಿಗೆ ಹೋಗಿ ಬರ ಪರಿಹಾರ ನೀಡುವಂತೆ ಪ್ರತಿಭಟನೆ ನಡೆಸಿದರು ಸ್ಪಂದಿಸಲಿಲ್ಲ. ಸುಪ್ರೀಂ ಕೋರ್ಟ್ಗೆ ದಾವೆ ಹಾಕಿದ್ದರಿಂದ, ಇನ್ನೊಂದು ವಾರದೊಳಗೆ ಬರ ಪರಿಹಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಇಂತವರನ್ನು ಮತ್ತೇ ಅಧಿಕಾರಕ್ಕೆ ತರಬೇಕೇ ಎಂದು ಪ್ರಶ್ನಿಸಿದರು.
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಹಿಂದೂಗಳ ಹೆಣ್ಣುಮಕ್ಕಳ ತಾಳಿ ತೆಗೆದು ಮುಸ್ಲಿಂರಿಗೆ ಕೊಡ್ತಾರೆ, ಹಿಂದೂಗಳ ಆದಾಯವನ್ನು ಮುಸ್ಲಿಂರಿಗೆ ಹಂಚುತ್ತಾರೆ ಎಂದು ಗೌರವಯುತ ಹುದ್ದೆಯಲ್ಲಿರುವ ಪ್ರಧಾನಮಂತ್ರಿಯವರು ಹೇಳುತ್ತಿದ್ದಾರೆ. ಅವರ ಬಾಯಲ್ಲಿ ಇಂತಹ ಮಾತನ್ನು ಕೇಳಬಹುದೇ. ಗೌರವಯುತ ಹುದ್ದೆಯಲ್ಲಿದ್ದುಕೊಂಡು ಜನರ ಮನಸ್ಸಲ್ಲಿ ದ್ವೇಷ ಹುಟ್ಟಿಸುವಂತಹ ಮಾತುಗಳನ್ನು ಯಾರು ಆಡಿರಲಿಲ್ಲ ಎಂದು ಬೇಸರಿಸಿದರು
ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸಮಾಜದ ಮುಖ್ಯವಾಹಿನಿಗೆ ತರಬೇಕು ಎಂಬುದು ಕಾಂಗ್ರೆಸ್ನ ಉದ್ದೇಶ. ತುಮಕೂರು ನಗರವು ಬೆಂಗಳೂರು ಮಹಾನಗರಕ್ಕೆ ಪ್ರತ್ಯೇಕವಾಗಿ ಅಭಿವೃದ್ಧಿಯಲ್ಲಿ ವೇಗವಾಗಿ ಬೆಳೆಯುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತುಮಕೂರು ಜಿಲ್ಲೆಯ ಎಲ್ಲ ರೀತಿಯ ಅಭಿವೃದ್ಧಿಗೆ ಸಹಕಾರ ನೀಡುತ್ತಿದ್ದಾರೆ. ನಗರಕ್ಕೆ ಮೆಟ್ರೋ ರೈಲು ತರಲು ಕಾರ್ಯಸಾಧ್ಯತಾ ವರದಿಗೆ ಬಜೆಟ್ನಲ್ಲಿ ಅವಕಾಶ ಮಾಡಲಾಗಿದೆ. ಈ ಚುನಾವಣೆ ದೆಶದ ಭವಿಷ್ಯ ನಿರ್ಮಾಣ ಮಾಡಲಿದೆ. ನಮ್ಮ ಜಿಲ್ಲೆಯ ಅಭಿವೃದ್ದಿಯು ಇದರಲ್ಲಿ ಸೇರಿಕೊಂಡಿದೆ. ಇದನ್ನು ಅರಿತು, ನಮ್ಮ ಪಕ್ಷದ ಅಭ್ಯರ್ಥಿ ಮುದ್ದಹನುಮೇಗೌಡ ಅವರನ್ನು ಗೆಲ್ಲಿಸಿಕೊಡಬೇಕು ಎಂದು ಹೇಳಿದರು.
ನಮ್ಮ ಜಿಲ್ಲೆಗೆ ಸಂಬಂಧವಿಲ್ಲದವರನ್ನು ಕರೆದುಕೊಂಡು ಅಭ್ಯರ್ಥಿಯನ್ನಾಗಿ ಮಾಡಿದ್ದಾರೆ. ಕಲೆಲದ ವಿಧಾಮಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧವಾಗಿ ವರುಣಾದಲ್ಲಿ, ಚಾಮರಾಜನಗರದಲ್ಲಿ ಪುಟ್ಟರಂಗಶೆಟ್ಟಿ ವಿರುದ್ಧ ಸ್ಪರ್ಧಿಸಿ ಸೋತರು. ಜಿಲ್ಲೆಯ ಜನರಿಗೆ ಸಿಗದೇ ಇರುವ ವ್ಯಕ್ತಿಯನ್ನು ಆಯ್ಕೆ ಮಾಡಬೇಕೆ? ಎಂದು ಪ್ರಶ್ನಿಸಿದರು.