ತುಮಕೂರು:- ತುಮಕೂರಿನ ಹೊರವಲಯ ದೇವರಾಯಪಟ್ಟಣದ ಕೆರೆಕೋಡಿಯಲ್ಲಿ ಕೆಸರಿನಲ್ಲಿ ಮುಳುಗಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ವ್ಯಕ್ತಿಯನ್ನ ಕ್ಯಾತ್ಸಂದ್ರ ಠಾಣೆ ಪೊಲೀಸರು ರಕ್ಷಿಸಿದ ಘಟನೆ ಜರುಗಿದೆ
ಬಿಸಿಲಿನ ತಾಪಮಾನ ಹೆಚ್ಚಳ ಹಿನ್ನೆಲೆ… ಬಿಯರ್ ಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್..!
ಕೆರೆಕೋಡಿಹಳ್ಳದ ಕೆಸರಿನಲ್ಲಿ ಅಪರಿಚಿತ ವ್ಯಕ್ತಿ ಸಿಲುಕಿ ಒದ್ದಾಡುತ್ತಿದ್ದ. ಈ ಕುರಿತು ಕ್ಯಾತ್ಸಂದ್ರ ಠಾಣೆ ಪೊಲೀಸರಿಗೆ ಸ್ಥಳೀಯ ನಿವಾಸಿಗಳು ಮಾಹಿತಿ ನೀಡಿದ್ದರು. ಕೂಡಲೇ ಸ್ಥಳಕ್ಕೆ ಆಗಮಿಸಿ ಖುದ್ದು ಪೊಲೀಸರೇ ಕೆಸರಿಗಿಳಿದು ಶೋಧಕಾರ್ಯ ನಡೆಸಿದ್ದರು. ಹುಡುಕಾಟದ ವೇಳೆ ಕೆಸರಿನಲ್ಲಿ ಮುಳುಗುತ್ತಿದ್ದ ವ್ಯಕ್ತಿಯ ಕೈ ಮಾತ್ರ ಕಾಣಿಸಿದೆ. ಕೂಡಲೇ ಕೆಸರಿನಿಂದ ಆತನನ್ನ ಮೇಲಕ್ಕೆತ್ತಿ ಸಾವಿನ ದವಡೆಯಿಂದ ಸಿಬ್ಬಂದಿ ಪಾರು ಮಾಡಿದ್ದಾರೆ.
ಕ್ಯಾತ್ಸಂದ್ರ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಮಹೇಶ್ ಹಾಗೂ ಹೊಯ್ಸಳ ಕಾರು ಚಾಲಕ ಬಸವರಾಜು ಎಂಬುವವರು ಮುಳುಗ್ತಿದ್ದ ವ್ಯಕ್ತಿಯನ್ನ ರಕ್ಷಣೆ ಮಾಡಿದ್ದಾರೆ. ಅಸ್ವಸ್ಥ ಅಪರಿಚಿತ ವ್ಯಕ್ತಿಗೆ ತುಮಕೂರಿನ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.