ಕೊಚ್ಚಿ:- ನೀರಿಲ್ಲ, ಅನ್ನವಿಲ್ಲ ಶಬರಿಮಲೆಗೆ ದಯವಿಟ್ಟು ಬರಬೇಡಿ ಎಂದು ಕನ್ನಡಿಗರು ಆಕ್ರೋಶ ಹೊರ ಹಾಕಿದ್ದಾರೆ.
ನಮಗಿಲ್ಲಿ ಕುಡಿಯಲು ನೀರಿಲ್ಲ. ಹಸಿವಾಗುತ್ತಿದ್ದರೂ ತಿನ್ನಲು ಅನ್ನವಿಲ್ಲ. ಅಷ್ಟೇ ಏಕೆ ಕನಿಷ್ಠ ಪಕ್ಷ ನಮಗೆ ಶೌಚದ ವ್ಯವಸ್ಥೆ ಕೂಡ ಇಲ್ಲ. ಆ ಸಿಎಂ ಪಿಣರಾಯಿ ವಿಜಯನ್ ಇದನ್ನೆಲ್ಲ ನೋಡಲ್ವ? ಅಯ್ಯೋ ನಿಮ್ಮ ಕೈ ಮುಗಿತೀವಿ ದಯವಿಟ್ಟು ಯಾರೂ ಶಬರಿಮೆಲೆಗೆ ಬರಬೇಡಿ’ ಇದು ಕೇರಳದ ಶಬರಿಮಲೆಯಲ್ಲಿ ತೀವ್ರ ಸಂಕಷ್ಟ ಅನುಭವಿಸುತ್ತಿರುವ ಕನ್ನಡಿಗ ಭಕ್ತರ ಗೋಳು.
![Demo](https://ainlivenews.com/wp-content/uploads/2023/12/spoorthi-1.jpg)
ಈ ಬಾರಿ ಶಬರಿಮಲೆಯಲ್ಲಿ ಭಾರೀ ಅವ್ಯವಸ್ಥೆ ಉಂಟಾಗಿದ್ದು, ಭಕ್ತರಿಗೆ ಯಾವುದೇ ಕನಿಷ್ಠ ಮೂಲಭೂತ ಸೌಕರ್ಯ ಒದಗಿಸುವಲ್ಲಿಯೂ ಕೇರಳ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಭಕ್ತಾದಿಗಳಿಂದ ಭಾರೀ ಆಕ್ರೋಶ ವ್ಯಕ್ತವಾಗಿದೆ. ಇದರ ಹೊರತಾಗಿಯೂ ಪರಿಸ್ಥಿತಿಯಲ್ಲಿ ಸುಧಾರಣೆಯಾಗದ ಕುರಿತು ಶಬರಿಮೆಲೆಗೆ ತೆರಳಿರುವ ಕರ್ನಾಟಕ, ತಮಿಳುನಾಡು ಸೇರಿದಂತೆ ಇತರ ಭಕ್ತಾದಿಗಳು ತಮ್ಮ ಪರಿಸ್ಥಿತಿಯ ಬಗ್ಗೆ ಹೇಳಿಕೊಂಡು ಕೇರಳ ಸರ್ಕಾರ ಹಿಡಿಶಾಪ ಹಾಕಿದ್ದಾರೆ.
ನಮಗೆ ಇಲ್ಲಿ ಕನಿಷ್ಠ ಶೌಚಾಲಯ ವ್ಯವಸ್ಥೆಯೂ ಇಲ್ಲ. ಕುಡಿಯಲು ನೀರಿಲ್ಲ, ಊಟ ಮಾಡಲು ಏನೂ ಆಹಾರವಿಲ್ಲ. ಅಯ್ಯೋ ನಿಮ್ಮ ಕೈ ಮುಗೀತಿವಿ ಇನ್ನು ಶಬರಿಮಲೆಗೆ ದಯವಿಟ್ಟು ಯಾರೂ ಬರಬೇಡಿ. ಪೊಲೀಸರು ಕೂಡ ನಮ್ಮ ಮೇಲೆ ದೌರ್ಜನ್ಯ ಮಾಡ್ತಿದ್ದಾರೆ, ದಾದಾಗಿರಿ ಮಾಡ್ತಿದ್ದಾರೆ. ಪೊಲೀಸರು ನಮಗೆ ಶೂ ತೋರಿಸುತ್ತಿದ್ದಾರೆ. ಆದರೆ ಯಾಕೆ ಅವರು ನಮಗೆ ಶೂ ತೋರಿಸಬೇಕು? ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ಇದನ್ನೆಲ್ಲ ನೋಡಲ್ವ? ಇಂಥ ಅವ್ಯವಸ್ಥೆಗೆ ಈ ಕೇರಳ ಸರ್ಕಾರಕ್ಕೆ ನಾಚಿಕೆಯಾಗಬೇಕು. ವಾಹನ ಸಂಚಾರ ವ್ಯವಸ್ಥೆಯಿಲ್ಲದೇ ಟ್ರಾಫಿಕ್ನಿಂದ ಇಡೀ ದಿನ ಬಿಸಿಲಿನಲ್ಲಿ ಗಾಡಿಯಲ್ಲೇ ಕಾಯ್ತಿದ್ದೇವೆ. ಕೇರಳ ಸರ್ಕಾರಕ್ಕೆ ಧಿಕ್ಕಾರ ಕೂಗ್ತೀವಿ, ಕೇರಳ ಸರ್ಕಾರಕ್ಕೆ ಶೇಮ್ ಶೇಮ್ ಎಂದಿದ್ದಾರೆ
![](https://ainlivenews.com/wp-content/uploads/2024/01/Ad-Banner-copy-scaled.jpg)