ಲಕ್ನೋ: ಪ್ರಧಾನಿ ನರೇಂದ್ರ ಮೋದಿ ಅವರು ವಾರಣಾಸಿ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸುವುದಕ್ಕೂ ಮುನ್ನ ದಶಾಶ್ವಮೇಧ ಘಾಟ್ನಲ್ಲಿ ಗಂಗಾ ಆರತಿ ನೆರವೇರಿಸಿದರು. 2024 ರ ಲೋಕಸಭಾ ಚುನಾವಣೆಗೆ 11:40 ಕ್ಕೆ ನಾಮಪತ್ರ ಸಲ್ಲಿಸಲಿದ್ದು, ಅದಕ್ಕೂ ಮುಂಚಿತವಾಗಿ ಅವರು ಗಂಗಾ ನದಿಗೆ ಪ್ರಾರ್ಥನೆ ಸಲ್ಲಿಸಿದ್ದಾರೆ. ‘ಹರ್ ಹರ್ ಮಹಾದೇವ್’ ಘೋಷಣೆಯ ನಡುವೆ ಗಂಗಾ ಪೂಜೆಯನ್ನು ಪೂರ್ಣಗೊಳಿಸಿದರು.
Uttar Pradesh: Prime Minister Narendra Modi offers prayers at Dasaswamedh Ghat in Varanasi pic.twitter.com/jNhYXX4Xu7
— ANI (@ANI) May 14, 2024
ವೇದ ಮಂತ್ರಗಳ ಪಠಣದ ಜೊತೆಗೆ ಮೋದಿ ದಶಾಶ್ವಮೇಧ್ ಘಾಟ್ನಲ್ಲಿ ಗಂಗಾ ಮಾತೆಗೆ ಪ್ರಾರ್ಥನೆ ಸಲ್ಲಿಸಿದರು. ಇಂದು ಗಂಗಾ ಸಪ್ತಮಿ, ಈ ದಿನ ಗಂಗಾ ಮಾತೆಗೆ ಪೂಜೆ ಸಲ್ಲಿಸುವುದು ವಿಶೇಷ ಮಹತ್ವವನ್ನು ಹೊಂದಿದೆ ಎಂದು ಜ್ಯೋತಿಷಿ ಪಂಡಿತ್ ರಿಷಿ ದ್ವಿವೇದಿ ಹೇಳಿದ್ದಾರೆ. ಅದರಂತೆ ಪ್ರಧಾನಿಯವರು ಇಂದು ಗಂಗಾರತಿ ಬೆಳಗಿದ್ದಾರೆ.
![](https://ainlivenews.com/wp-content/uploads/2024/01/Ad-Banner-copy-scaled.jpg)