ಮಯಾಂಕ್ ದಿಢೀರ್ ಅಸ್ವಸ್ಥರಾಗಲು ಕಾರಣ ಏನೆಂಬುವುದನ್ನು ಇಂಡಿಗೋ ಏರ್ಲೈನ್ಸ್ ಸ್ಪಷ್ಟನೆ ನೀಡಿದೆ.
ಸೋಮವಾರ ತ್ರಿಪುರ ವಿರುದ್ಧ ಗೆಲುವು ದಾಖಲಿಸಿದ ಕರ್ನಾಟಕ ತಂಡ, ರೈಲ್ವೇಸ್ ವಿರುದ್ಧದ ತನ್ನ ಮುಂದಿನ ಪಂದ್ಯಕ್ಕಾಗಿ ಮಂಗಳವಾರ ಸೂರತ್ಗೆ ಪ್ರಯಾಣಿಸಲು ದೆಹಲಿ ವಿಮಾನ ಏರಿತು. ತಂಡದೊಂದಿಗೆ ವಿಮಾನ ಹತ್ತಿದ ಮಯಾಂಕ್ ಅಗರ್ವಾಲ್ ಸೀಟಿನ ಮುಂಭಾಗದಲ್ಲಿದ್ದ ನೀರು ಕುಡಿದಿದ್ದಾರೆ. ತಕ್ಷಣವೇ ಆರೋಗ್ಯದಲ್ಲಿ ಏರುಪೇರಾಗಿದ್ದು, ವಿಮಾನದಲ್ಲಿ ಒಂದೆರಡು ಬಾರಿ ವಾಂತಿ ಮಾಡಿಕೊಂಡಿದ್ದಾರೆ. ಕೂಡಲೆ ಮಯಾಂಕ್ ಅವರನ್ನು ವಿಮಾನದಿಂದ ಕೆಳಗೆ ಕರೆತಂದು ಅಗರ್ತಲದ ಐಎಲ್ಎಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ವೈದ್ಯರು ಕೆಲ ಪರೀಕ್ಷೆಗಳಿಗೆ ಒಳಪಡಿಸಿದ್ದಾರೆ ಎಂದು ತ್ರಿಪುರ ಕ್ರಿಕೆಟ್ ಸಂಸ್ಥೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆದರೆ ಘಟನೆಯ ಬಗ್ಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಘಟನೆಗೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್ಸಿಎ) ಯಾವುದೇ ಅಧಿಕೃತ ಹೇಳಿಕೆ ಬಿಡುಗಡೆ ಆಗಿಲ್ಲ. ಮಯಾಂಕ್ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ನಂತರ ಶೀಘ್ರ ಬೆಂಗಳೂರಿಗೆ ಶ್ಟಿ ಮಾಡುವ ಸಾಧ್ಯತೆಗಳಿವೆ.
ವೈದ್ಯಕೀಯ ತುರ್ತುಸ್ಥಿತಿಯಿಂದಾಗಿ ವಿಮಾನ ಅಗರ್ತಲಕ್ಕೆ ಹಿಂದಿರುಗಿದ್ದನ್ನು ‘ಇಂಡಿಗೋ’ ಖಚಿತಪಡಿಸಿದೆ. ಅಗರ್ತಲದಲ್ಲಿ ಮಯಾಂಕ್ರನ್ನು ಆಸ್ಪತ್ರೆಗೆ ಸೇರಿಸಿದ ಬಳಿಕ ‘ಇಂಡಿಗೋ ್ಲೈಟ್ 6ಇ 5177’ ಸಂಜೆ 4.20ಕ್ಕೆ ಮತ್ತೆ ದೆಹಲಿಗೆ ತೆರಳಿತು ಎನ್ನಲಾಗಿದೆ. ಮಯಾಂಕ್ ಟೀಮ್ ಇಂಡಿಯಾ ಪರ 21 ಟೆಸ್ಟ್ ಮತ್ತು 5 ಏಕದಿನ ಪಂದ್ಯಗಳನ್ನು ಆಡಿದ್ದಾರೆ.