ವಿಜಯಪುರ: ರಾಜ್ಯದಲ್ಲಿ ಭೀಕರ ಬರಗಾಲವಿದ್ದರೂ ಕೇಂದ್ರ ಸರಕಾರ ಬರ ಪರಿಹಾರ ಬಿಡುಗಡೆ ಮಾಡದೇ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಆಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂಬಿ ಪಾಟೀಲ ಆರೋಪಿಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಎಂಬಿ ಪಾಟೀಲ, ರಾಜ್ಯದಲ್ಲಿ ಭೀಕರ ಬರ ಪರಿಸ್ಥಿತಿ ಎದುರಾಗಿದ್ದು, ಸರಕಾರ ಪರಿಸ್ಥಿತಿ ನಿಭಾಯಿಸಲು ಸಕಲ ಕ್ರಮಗಳನ್ನು ಕೈಗೊಂಡಿದೆ. ಆದರೆ, ಕೇಂದ್ರ ಸರಕಾರ ಯಾವುದೇ ರೀತಿಯಲ್ಲಿ ಸ್ಪಂದಿಸುತ್ತಿಲ್ಲ.
ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿದರು. ಕೇಂದ್ರ ಬರ ಅಧ್ಯಯನ ತಂಡ ರಾಜ್ಯಕ್ಕೆ ಭೇಟಿ ನೀಡಿ ಒಂದು ತಿಂಗಳಾದರೂ ಬರ ಪರಿಹಾರ ಹಣ ಬಿಡುಗಡೆ ಮಾಡಿಲ್ಲ. ರಾಜ್ಯ ಸರಕಾರ ಸಾಕಷ್ಟು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಎನ್ ಡಿಆರ್ ಎಫ್ ಮಾರ್ಗಸೂಚಿಗಳಿಂದ ರೈತರಿಗೆ ಅನ್ಯಾಯವಾಗುತ್ತಿದೆ. ಪ್ರತಿ ಹೆಕ್ಟೇರ್ ನಿಗದಿ ಪಡಿಸಿರುವ ಪರಿಹಾರ ಮೊತ್ತ ರೈತರು ಬೆಳೆಗಾಗಿ ಮಾಡಿರುವ ಖರ್ಚಿಗೂ ಸಾಕಾಗುವುದಿಲ್ಲ.
ವಯಸ್ಸಾದಂತೆ ಈ ನೋವುಗಳು ನಿಮ್ಮನ್ನ ಕಾಡುತ್ತಿದ್ದರೆ.. ಇಲ್ಲಿದೆ ಉಚಿತ ಸಲಹೆ ಸರಳ ಚಿಕಿತ್ಸೆ- ಪರಿಹಾರ
ಈ ಪರಿಹಾರ ರೈತರ ಪಾಲಿಗೆ ಬಕಾಸುರನ ಹೊಟ್ಟೆಗೆ ಅರೆಕಾಸಿಮಜ್ಜಿಗೆ ಎಂಬಂತಾಗಿದೆ. ಒಂದು ಎಕರೆಯಲ್ಲಿ ಬಿತ್ತನೆ ಮತ್ತು ನಿರ್ವಹಣೆಗೆ ರೈತರು ಸುಮಾರು 10 ಸಾವಿರ ರೂಪಾಯಿ ಖರ್ಚು ಮಾಡಿದ್ದರೆ, ಪರಿಹಾರವಾಗಿ ಕೇವಲ 3500 ರೂಪಾಯಿಮಾತ್ರ ನೀಡಲಾಗುತ್ತದೆ. ಈ ಅವೈಜ್ಞಾನಿಕ ಮಾರ್ಗಸೂಚಿ ಬದಲಾಗಬೇಕು. ರೈತರು ಬೆಳೆ ನಿರ್ವಹಣೆ ಮಾಡಿದ ವೆಚ್ಚದಲ್ಲಿ ಕನಿಷ್ಠ ಶೇ 50ರಷ್ಟಾದರೂ ಬೆಳೆಹಾನಿ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದರು.