ದೊಡ್ಡಬಳ್ಳಾಪುರ:-ಚಲಿಸುತ್ತಿದ್ದ ಕಾರಿನಲ್ಲಿ ಇದಕ್ಕಿದಂತೆ ಬೆಂಕಿ ಕಾಣಿಸಿಕೊಂಡಿದ್ದು, ನೋಡ ನೋಡುತ್ತಿದ್ದಂತೆ ಸ್ವಿಪ್ಟ್ ಕಾರು ಹೊತ್ತಿ ಉರಿದಿದೆ.
ದೊಡ್ಡಬಳ್ಳಾಪುರ-
ಯಲಹಂಕ ರಸ್ತೆಯ ಮಾರಸಂದ್ರ ಬಳಿಯಲ್ಲಿ ನಡೆದ ಅವಘಡ ಸಂಭವಿಸಿದೆ. ಅದೃಷ್ಟವಶಾತ್ ವಕೀಲರ ಕುಟುಂಬ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಕೀಲರ ಕುಟುಂಬ, ಗೌರಿಬಿದನೂರು ಕಡೆಯಿಂದ ಬೆಂಗಳೂರು ಕಡೆಗೆ ಬರುತ್ತಿದ್ದವೆಳೆ ಇದ್ದಕ್ಕಿದಂತೆ ಕಾರು ಹೊತ್ತಿ ಉರಿದಿದೆ.
ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿನಂದಿಸುವಲ್ಲಿ ಯಶಸ್ವಿ ಆಗಿದ್ದಾರೆ. ಸ್ಥಳಕ್ಕೆ ರಾಜಾನುಕುಂಟೆ ಪೊಲೀಸರು ಭೇಟಿ ಪರಿಶೀಲನೆ ಮಾಡಿದ್ದಾರೆ. ರಾಜಾನುಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.