ಬೆಳಗಾವಿ : ಪಾಠ ಮಾಡುತ್ತಿರುವಾಗಲೇ ಶಿಕ್ಷಕರೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಐಗಳಿ ಗ್ರಾಮದ ತೆಲಸಂಗ ವಸತಿ ತೋಟದ ಸರ್ಕಾರಿ ಕನ್ನಡ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ತವ್ಯ ನಿರತ ಶಿಕ್ಷಕನೋರ್ವ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಮೃತಪಟ್ಟ ಶಿಕ್ಷಕನನ್ನು ಭೈರಪ್ಪ ಆರ್ ಸಾತಗೊಂಡನವರ (55) ಎನ್ನಲಾಗಿದ್ದು, ಮೃತ ಶಿಕ್ಷಕ ಇಬ್ಬರು ಪುತ್ರಿಯರನ್ನು, ಅಪಾರ ಬಂಧು-ಬಳಗವನ್ನ ಅಗಲಿದ್ದಾರೆ.