ತುಮಕೂರು: ಬೈಕ್ಗೆ ಹಿಂಬದಿಯಿಂದ ಟ್ಯಾಕ್ಟರ್ ಡಿಕ್ಕಿಯಾಗಿ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾರೆ. ತುಮಕೂರು ಜಿಲ್ಲೆ ಕುಣಿಗಲ್ ಪಟ್ಟಣದಲ್ಲಿ ಘಟನೆ ನಡೆದಿದೆ. ಬಾಗೇನಹಳ್ಳಿ ಗ್ರಾಮದ ಹಿಂದೂಶ್ರೀ (16), ಮೃತ ದುರ್ದೈವಿ.
ಕತ್ತು ಸೀಳಿ ವ್ಯಕ್ತಿಯ ಬರ್ಬರ ಹತ್ಯೆ ; ದೇವಸ್ಥಾನದ ಮುಂದೆಯೇ ಹರಿದ ನೆತ್ತರು
ಕುಣಿಗಲ್ ಪಟ್ಟಣದ ಸ್ಟೆಲ್ಲಾಮೇರಿಸ್ ಶಾಲೆಯಲ್ಲಿ ಎಸ್ಎಸ್ಎಲ್ ಸಿ ಓದುತ್ತಿದ್ದ ಹಿಂದೂಶ್ರೀ, ಇಂದು ಶಾಲೆಯಲ್ಲಿ ಬೀಳ್ಕೊಡುಗೆ ಕಾರ್ಯಕ್ರಮ ಮುಗಿಸಿ ವಾಪಸ್ಸಾಗುತ್ತಿದ್ದಾಗ ಅವಘಡ ಸಂಭವಿಸಿದೆ. ಮನೆಗೆ ವಾಪಸ್ ಬೈಕ್ ನಲ್ಲಿ ತೆರಳುವಾಗ ಹಿಂಬದಿಯಿಂದ ಬಂದ ಟ್ರ್ಯಾಕ್ಟರ್ ಡಿಕ್ಕಿ ಹೊಡೆದಿದ್ದು, ತಲೆ ಮೇಲೆ ಟ್ಯಾಕ್ಟರ್ ಚಕ್ರ ಹರಿದ ಪರಿಣಾಮ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಘಟನಾ ಸ್ಥಳಕ್ಕೆ ಕುಣಿಗಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.