ವಿಜಯಪುರ: ಮೊನ್ನೆ 11 ಸಾವಿರ ಎಕ್ರೆ ವಕ್ಫ್ ಜಾಗ ಇದೆ ಎಂದಿದ್ದರು. ಈಗ ಇದು 15 ಸಾವಿರ ಎಕ್ರೆಗೆ ಏರಿಕೆಯಾಗಿದೆ. ಹೀಗೆ ಬಿಟ್ಟರೆ ದೇವಸ್ಥಾನ, ವಿಧಾನಸೌಧ ನಮ್ಮದು ಎನ್ನುತ್ತಾರೆ ಎಂದು ವಿಜಯಪುರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರ ಪಹಣಿಯಲ್ಲಿ ವಕ್ಫ್ ಹೆಸರು ವಿಚಾರವಾಗಿ ಸಚಿವ ಜಮೀರ್ ಅಹ್ಮದ್, ಎಂ.ಬಿ ಪಾಟೀಲ್ ಕೋಮು ಗಲಭೆ ಎಬ್ಬಿಸಲು ಈ ರೀತಿ ಮಾಡುತ್ತಿದ್ದಾರೆ.
ರಾಜ್ಯದಲ್ಲಿ ಮತ್ತೊಂದು ಪಾಕಿಸ್ತಾನ ನಿರ್ಮಾಣ ಮಾಡುವಂತೆ ವಕ್ಫ್ ಕೆಲಸ ಮಾಡ್ತಿದೆ. ರಾಜ್ಯದಲ್ಲಿ ಎಲ್ಲವೂ ವಕ್ಫ್ ಆಸ್ತಿ ಎಂದು ಹೇಳುತ್ತಾರೆ. ಹಾಗಾದರೆ ಹಿಂದೂಗಳು ಎಲ್ಲಿಗೆ ಹೋಗಬೇಕು? ಹೊನವಾಡದಲ್ಲಿ 1200 ಎಕರೆ ವಕ್ಫ್ ಬೋರ್ಡ್ಗೆ ಸೇರ್ಪಡೆಯಾಗಿದೆ. ಇವರು ಕೇವಲ 11 ಎಕರೆ ಎನ್ನುತ್ತಾರೆ. ಯಾಕೆ ಸುಳ್ಳು ಹೇಳುತ್ತಿದ್ದೀರಾ? ಅಲ್ಪಸಂಖ್ಯಾತರ ಮತ ಓಲೈಕೆ ಮಾಡಲು ಈ ರೀತಿ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
Passion Fruit Benefits: ಪ್ಯಾಶನ್ ಫ್ರೂಟ್ ಹಣ್ಣಿನ ಸೇವನೆಯಿಂದ ಸಿಗುವ ಆರೋಗ್ಯ ಪ್ರಯೋಜನಗಳೇನು ಗೊತ್ತಾ.?
ನಾವು ರೈತರ ಜೊತೆ ಇದ್ದೇವೆ, ರೈತರಿಗಾಗಿ ಉಚಿತ ಕಾನೂನು ಹೋರಾಟ ಮಾಡುತ್ತೇವೆ. ರಾಜ್ಯದ ಯಾವುದೇ ಮೂಲೆಯಲ್ಲಿ ರೈತರ ಜಮೀನಲ್ಲಿ ವಕ್ಫ್ ಬೋರ್ಡ ಹೆಸರು ಇದ್ದರೂ ಅವರು ನಮ್ಮ ಬಳಿ ಬರಲಿ. ನಮ್ಮ ಶಾಸಕರ ಕಛೇರಿಗೆ ಬಂದು ದಾಖಲಾತಿ ನೀಡಿದರೆ ಅವರ ಪರವಾಗಿ ನಾವು ಕಾನೂನು ಹೋರಾಟ ಮಾಡುತ್ತೇವೆ. ರೈತರು ಆತಂಕ ಪಡಬಾರದು, ಕಾನೂನು ಹೋರಾಟ ಮಾಡೋಣ. ಯಾರಿಗಾದರೂ ನೋಟಿಸ್ ಬಂದರೆ ನಮ್ಮ ಕಛೇರಿಗೆ ಸಂಪರ್ಕ ಮಾಡಿ. ವಿಜಯಪುರ ಜಿಲ್ಲೆ ಮಾತ್ರವಲ್ಲ ಬೇರೆ ಜಿಲ್ಲೆಯ ರೈತರು ಸಹ ನಮ್ಮ ಕಛೇರಿಗೆ ಸಂಪರ್ಕ ಮಾಡಬಹುದು ಎಂದು ಭರವಸೆ ನೀಡಿದರು.