ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರ ತನ್ನ ಮೂರನೇ ಅವಧಿಯಲ್ಲಿ ಅಸ್ತಿತ್ವಕ್ಕಾಗಿ ಹೋರಾಟ ನಡೆಸಬೇಕಾಗಿ ಬರಬಹುದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿಶ್ಲೇಷಿಸಿದ್ದಾರೆ. ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ನಂತರ ‘ಫೈನಾನ್ಶಿಯಲ್ ಟೈಮ್ಸ್’ಗೆ ನೀಡಿದ ತಮ್ಮ ಮೊದಲ ಸಂದರ್ಶನದಲ್ಲಿ ಅವರು, ಬಿಜೆಪಿ 240 ಸ್ಥಾನಗಳನ್ನು ಗಳಿಸಿದ ನಂತರ ಭಾರತೀಯ ರಾಜಕೀಯದಲ್ಲಿ ಮಹತ್ತರ ಬದಲಾವಣೆಯಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
2014 ರಲ್ಲಿ ಮೋದಿ ಅಧಿಕಾರಕ್ಕೆ ಬಂದ ನಂತರ ಬಿಜೆಪಿ ಮೊದಲ ಬಾರಿಗೆ ಬಹುಮತ ಗಳಿಸಲು ವಿಫಲವಾಗಿದ್ದು, ಟಿಡಿಪಿ ಮತ್ತು ಜೆಡಿಯುನಂತಹ ಮಿತ್ರಪಕ್ಷಗಳ ಸಹಾಯದಿಂದ ಸರ್ಕಾರ ರಚಿಸಿದೆ. “ಭಾರತೀಯ ರಾಜಕೀಯ ವ್ಯವಸ್ಥೆಯಲ್ಲಿ ಖಾಲಿ ಇದ್ದ ಜಾಗ ಈಗಿಲ್ಲ. ಭಾರತದ ರಾಜಕೀಯದಲ್ಲಿ ಭಾರೀ ಪಲ್ಲಟವಾಗಿದೆ,” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
Masala Peanuts: ಬೇಕರಿಯಲ್ಲಿ ಸಿಗುವ ಮಸಾಲಾ ಶೇಂಗಾ ಮನೆಯಲ್ಲೇ ಮಾಡಿ..! ಇಲ್ಲಿದೆ ರೆಸಿಪಿ
ಪ್ರಧಾನಿ ಮೋದಿಯವರ ಪಾಳಯದಲ್ಲಿ ‘ದೊಡ್ಡ ಅತೃಪ್ತಿ’ ಇದೆ ಎಂದಿರುವ ರಾಹುಲ್ ಗಾಂಧಿ, ಅವರ ಜೊತೆ ಇರುವವರು ನಮ್ಮ ಸಂಪರ್ಕದಲ್ಲಿದ್ದಾರೆ ಎಂಬ ಬಾಂಬ್ ಸಿಡಿಸಿದ್ದಾರೆ. ಆದರೆ ಆ ಬಗ್ಗೆ ಅವರು ಹೆಚ್ಚಿನ ವಿವರಗಳನ್ನು ಮಾತ್ರ ನೀಡಿಲ್ಲ. “ಅವರ ಬಳಿ ಇರುವ ಸಂಖ್ಯಾಬಲ ತುಂಬಾ ದುರ್ಬಲವಾಗಿವೆ. ಹೀಗಾಗಿ ಸಣ್ಣ ಏರುಪೇರಾದರೂ ಸರ್ಕಾರ ಬೀಳಬಹುದು. ಒಂದು ಮಿತ್ರ ಪಕ್ಷ ಇನ್ನೊಂದು ಕಡೆಗೆ ತಿರುಗಿದರೆ ಸಾಕು ಸರಕಾರ ಬೀಳುತ್ತದೆ,” ಎಂದು ಅವರು ವಿವರಿಸಿದ್ದಾರೆ.