ಹುಬ್ಬಳ್ಳಿ: ‘ಇಲ್ಲಿನ ಅಶೋಕನಗರ ರೈಲ್ವೆ ಸೇತುವೆಯಿಂದ ಶಕ್ತಿ ಕಾಲೊನಿವರೆಗಿನ 2.4 ಕಿ.ಮೀ. ಉದ್ದದ ರಸ್ತೆ ಕಾಮಗಾರಿಯನ್ನು ಮಾರ್ಚ್ 31ರ ಒಳಗೆ ಪೂರ್ಣಗೊಳಿಸಬೇಕು’ ಎಂದು ಶಾಸಕ ಮಹೇಶ ಟೆಂಗಿನಕಾಯಿ ಸೂಚಿಸಿದರು.
ವಿಶ್ವೇಶ್ವರ ನಗರದ ಉದ್ಯಾನದಲ್ಲಿನಡೆದ ಜನಸಂಪರ್ಕ ಸಭೆಯಲ್ಲಿ ಮಾತನಾಡಿದ ಅವರು, ‘ಅನುದಾನಕ್ಕೆ ಯಾವುದೇ ಸಮಸ್ಯೆ ಇಲ್ಲ. ರಸ್ತೆಯು ಗುಣಮಟ್ಟದಿಂದ ಕೂಡಿರಬೇಕು’ ಎಂದರು.
ಹು–ಧಾ ಮಹಾನಗರ ಪಾಲಿಕೆ ಆಯುಕ್ತ ಈಶ್ವರ ಉಳ್ಳಾಗಡ್ಡಿ ಮಾತನಾಡಿ, ‘ಶೀಘ್ರದಲ್ಲಿ ಕಾಮಗಾರಿ ಶುರುವಾಗಲಿದೆ’ ಎಂದು ಹೇಳಿದರು. ಪಾಲಿಕೆ ಸದಸ್ಯ ಸಂತೋಷ ಚೌಹಾಣ್, ಬೀರಪ್ಪ ಖಂಡೇಕರ, ಸಿದ್ದು ಮೊಗಲಿಶೆಟ್ಟರ್, ಪಾಲಿಕೆ ನೋಡಲ್ ಅಧಿಕಾರಿ ತುಬಾಕಿ ಬೇವೂರು, ಬಿಜೆಪಿ ವಕ್ತಾರ ರವಿ ನಾಯಕ, ಲೋಕೋಪಯೋಗಿ ಇಲಾಖೆ, ಎಲ್ ಆ್ಯಂಡ್ ಟಿ, ಪಾಲಿಕೆ ಅಧಿಕಾರಿಗಳು ಉಪಸ್ಥಿತರಿದ್ದರು.