ಉಡುಪಿ: ‘ಲೋಕಸಭಾ ಚುನಾವಣೆಯಲ್ಲಿ ನಿರೀಕ್ಷಿತ ಮಟ್ಟದ ಗೆಲುವು ಸಿಕ್ಕಿಲ್ಲ ಎನ್ನುವ ಕಾರಣಕ್ಕೆ ರಾಜ್ಯ ಸರಕಾರ ಘೋಷಿಸಿದ ಕಾಂಗ್ರೆಸ್ ಗ್ಯಾರಂಟಿ ಯೋಜನೆ ನಿಲ್ಲಿಸುವ ಮಾತಿಲ್ಲ. ಗ್ಯಾರೆಂಟಿ ರಾಜಕೀಯ ಉದ್ದೇಶಕ್ಕಲ್ಲ. ಗ್ಯಾರಂಟಿ ಜತೆ ಅಭಿವೃದ್ಧಿ ಕಾರ್ಯ, ಸೋಲಿನ ಪರಾಮರ್ಶೆ ನಡೆಸುತ್ತೇವೆ’ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.
https://ainlivenews.com/here-is-a-simple-home-remedy-for-the-nail-wrap-problem/
ಉಡುಪಿ ಜಿಲ್ಲೆಗೆ ಗುರುವಾರ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ‘ಪಟ್ಟಣ ಪ್ರದೇಶದಲ್ಲಿ ಗ್ಯಾರಂಟಿ ಅವಶ್ಯಕತೆ ಇದೆಯೋ ಇಲ್ಲವೋ ಗೊತ್ತಿಲ್ಲ. ಆದರೆ ಹಳ್ಳಿ, ಗ್ರಾಮೀಣ ಭಾಗದ ಜನಕ್ಕೆ ಈ ಯೋಜನೆಯಿಂದ ಉಪಯೋಗ ವಾಗಿದೆ. ಜನ ಸಾಮಾನ್ಯರ, ಬಡತನ ನಿರ್ಮೂಲನೆಗೆ ಗ್ಯಾರಂಟಿ ಯೋಜನೆ ಜಾರಿಗೆ ತಂದಿದ್ದೇವೆ. ಜನಕ್ಕೆ ಗ್ಯಾರಂಟಿ ತಲುಪಿದೆ. ಪಂಚ ಗ್ಯಾರಂಟಿ ಅನುಷ್ಠಾನ ಆಗಿದೆ’ ಎಂದರು.