ಬೆಂಗಳೂರು:- ಬಿ ಫಾರ್ಮ್ ಪಡೆಯಲು ಮಾಧ್ಯಮದ ಮುಂದೆ ಹೇಳಿಕೆ ನೀಡಿದ್ರೆ ತಪ್ಪೇನಿಲ್ಲ ಎಂದು ಪ್ರಿಯಾಂಕ ಖರ್ಗೆ ಹೇಳಿದ್ದಾರೆ.
ಹೆಚ್ಚಾಗಿ ಸ್ಮಾರ್ಟ್ ಫೋನ್ ಗಳು ಬ್ಲಾಸ್ಟ್ ಆಗಲು ಕಾರಣ ಏನು? ಈ ಟಿಪ್ಸ್ ಫಾಲೋ ಮಾಡಿ!
ಈ ಸಂಬಂಧ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಪ್ರಜಾಪ್ರಭುತ್ವ ಇದೆ, ಯಾರಿಗಾದರೂ ಸಮಸ್ಯೆಗಳಿದ್ದರೆ ಅವರು ನೇರವಾಗಿ ದೆಹಲಿಗೆ ಹೋಗಿ ಹೈಕಮಾಂಡ್ ಜೊತೆ ಮಾತಾಡಲಿ, ಹೈಕಮಾಂಡ್ ಎಲ್ಲರಿಗೂ ಜವಾಬ್ದಾರಿಗಳನ್ನು ನೀಡಿದೆ, ಸಿದ್ದರಾಮಯ್ಯನವರು ಸಿಎಂ ಆಗಿದ್ದಾರೆ ಮತ್ತು ಡಿಕೆ ಶಿವಕುಮಾರ್ ಡಿಸಿಎಂ; ಸದ್ಯಕ್ಕೆ ಕುರ್ಚಿಗಳು ಖಾಲಿ ಇಲ್ಲ, ಬಿ ಫಾರ್ಮ್ ಪಡೆದುಕೊಳ್ಳುವ ಉದ್ದೇಶಕ್ಕಾಗಿ ಸಾರ್ವಜನಿಕವಾಗಿ ಮತ್ತು ಮಾಧ್ಯಮಗಳ ಮುಂದೆ ಹೇಳಿಕೆ ನೀಡುವುದರಲ್ಲಿ ಯಾವುದೇ ಅರ್ಥವಿರುವುದಿಲ್ಲ, ಹೈಕಮಾಂಡ್ ನೀಡಿರುವ ಜವಾಬ್ದಾರಿಗಳನ್ನು ಎಲ್ಲರೂ ನಿಭಾಯಿಸಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.