ಹುಬ್ಬಳ್ಳಿ:- ಶ್ರೀಕಾಂತ ಪೂಜಾರಿಯನ್ನು ಅರೆಸ್ಟ್ ಮಾಡಲು ಯಾವ ದಾಖಲೆ ಇರಲಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ರಾಮಜನ್ಮಭೂಮಿ ಹೋರಾಟದ ಕೇಸ್ನಲ್ಲಿ ಆರೋಪಿಯಾಗಿರುವ ಕರಸೇವಕ ಶ್ರೀಕಾಂತ ಪೂಜಾರಿಯನ್ನು ಅರೆಸ್ಟ್ ಮಾಡಲು ಯಾವ ದಾಖಲೆ ಇರಲಿಲ್ಲ. ಹೀಗಾಗಿ ಕೋರ್ಟ್ ಬಿಡುಗಡೆ ಮಾಡಿದೆ. ನಾವು ಪ್ರತಿಭಟನೆ ಮಾಡದೇ ಹೋಗಿದ್ದರೆ ಇನ್ನು ಅನೇಕ ಹಿಂದೂ ಕಾರ್ಯಕರ್ತರನ್ನು ಬಂಧಿಸುತ್ತಿದ್ದರು ಎಂದರು.
ಶ್ರೀಕಾಂತ್ ಪೂಜಾರಿ ವಿರುದ್ದ ಅಸಭ್ಯವಾಗಿ ಮಾತಾಡಿರುವುದಕ್ಕೆ ನೀವು ರಾಜ್ಯಕ್ಕೆ ಕ್ಷಮೆ ಕೇಳಬೇಕು ಎಂದು ಹೇಳಿದ್ದಾರೆ.
ಈ ಕೇಸ್ನ ಎಫ್ಐಆರ್ ಕಾಪಿ ಕೂಡ ಇಲ್ಲ ಎಂದು ಹೇಳಿದ್ದಾರೆ. ಬಿಜೆಪಿ ಕಾಲದಲ್ಲಿ ರಾಮ ಮಂದಿರ ಆಗುತ್ತಿದೆ ಎಂಬ ಕಾರಣಕ್ಕೆ ಹೊಟ್ಟೆ ಕಿಚ್ಚಿನಿಂದ ಅರೆಸ್ಟ್ ಮಾಡಿದ್ದಾರೆ. ಹಿಂದೂ ದ್ವೇಷದಿಂದ ಅರೆಸ್ಟ್ ಮಾಡಿದ್ದೀರಿ ತಾನೆ ಎಂದು ಪ್ರಶ್ನಿಸಿದ್ದಾರೆ. ಸರ್ಕಾರ ಕಾನೂನು ರೀತಿ ನಡೆದುಕೊಂಡಿದ್ದೇವೆ ಎಂದಿತ್ತು. ನಾವು ಹಿಂದೂ ವಿರೋಧಿ ಅಲ್ಲ ಎಂದು ಸಿಎಂ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದರು. ನಾನು ಸಿದ್ದರಾಮಯ್ಯ ಅವರನ್ನು ಕೇಳುತ್ತೇನೆ, ನಿಮಗೆ ಮಾಹಿತಿ ಕೊಟ್ಟ ಅಧಿಕಾರಿಗಳು ನಿಮ್ಮನ್ನು ದಾರಿ ತಪ್ಪಿಸಿದ್ದಾರೆ. ಏಕೆಂದರೆ A1 ಖುಲಾಸೆಯಾಗಿದ್ದಾನೆ. ನನಗೆ ನೆನಪಿರುವ ಹಾಗೆ A7 ಖುಲಾಸೆ ಆಗಿದ್ದಾನೆ. ಎಲ್ಲರೂ ಖುಲಾಸೆ ಆಗಿದ್ದಾರೆ ಎಂದಿದ್ದಾರೆ.