ಬೆಂಗಳೂರು: ಹುಬ್ಬಳ್ಳಿ ಗಲಭೆ ಕೇಸ್ ವಾಪಸ್ ಪಡೆದಿರುವ ರಾಜ್ಯ ಸರ್ಕಾರದ ನಡೆ ಖಂಡಿಸಿ ಹೋರಾಟಕ್ಕಿಳಿದಿದ್ದಾರೆ. ಭಾನುವಾರ ಹುಬ್ಬಳ್ಳಿಯಲ್ಲಿ ಬೃಹತ್ ಹೋರಾಟ ನಡೆಸಿದ್ದ ಬಿಜೆಪಿ ನಾಯಕರು, ಇಂದು ಬೆಂಗಳೂರಿನ ಫ್ರೀಡಂಪಾರ್ಕ್ನಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿಪಕ್ಷ ನಾಯಕ ಆರ್ ಅಶೋಕ ಸೇರಿದಂತೆ ಬಿಜೆಪಿ ನಾಯಕರು ವಾಗ್ದಾಳಿ ನಡೆಸಿದರು
ಈ ಸರ್ಕಾರ ಭಯೋತ್ಪಾದಕರ ಸೂಚನೆ ಮೇರೆಗೆ ನಡೆಯುತ್ತಿದೆ. ಹುಬ್ಬಳಿಯಲ್ಲಿ ಹಾಕಿದ್ದ ಕೇ್ಗಳನ್ನು ವಾಪಸ್ ಪಡೆಯಿರಿ ಎಂದು ಅವರು ಸೂಚನೆ ನೀಡಿದರು, ಅದಕ್ಕೆ ಇವರು ವಾಪಸ್ ಪಡೆದಿದ್ದಾರೆ. ಮುಸ್ಲಿಮನರ ಋಣ ತೀರಿಸುತ್ತಿದ್ದಾರೆ ಎಂದರು.
ಇವರ (ಕಾಂಗ್ರೆಸ್ ನಾಯಕರ) ಬ್ರದರ್ಸ್ ಯಾರು? ಕುಕ್ಕರ್ ಬ್ಲಾಸ್ಟ್ ಮಾಡಿದ್ರೆ ಇವರ ಬ್ರದರ್ಸ್. ಎಲ್ಲಾ ಕಡೆ ಹಿಂದುಗಳನ್ನ ತುಳಿಯಲಾಗುತ್ತಿದೆ. ಗಣೇಶ ಹಬ್ಬಕ್ಕೆ ಪೊಲೀಸ್ ಅನುಮತಿ ಬೇಕು. ಸರ್ಕಾರ ಟಿಪ್ಪು ಆಡಳಿತ ಮಾಡುತ್ತಿದೆ. ಸಿದ್ದರಾಮಯ್ಯ ಮನೆ ದೇವರು ಟಿಪ್ಪು. ನಾಮ ಇಟ್ಟುಕೊಂಡು ಹೋದರೆ ನಾಮ್ ಗಿರಾಕಿನ ಅಂತಾ ಚೇಡಿಸ್ತಿದ್ರ, ಟ್ರಾನ್ಸಫರ್ಗೆ ಹೋದ್ರೆ ಜಿಲಾಬಿನಾ ಅನ್ನೋರು. ಈಗ ಸಿದ್ದರಾಮಯ್ಯ ಅವರೇ ಹೋಗಿ ಕುಂಕುಮ ಇಟ್ಟುಕೊಳ್ತಿದ್ದಾರೆ. ಜನ್ಮದಲ್ಲೇ ಅರ್ಚನೆ ಮಾಡಿಸಿರಲಿಲ್ಲ, ಈಗ ಮಾಡಿಸುತ್ತಿದ್ದಾರೆ. ಅವರು ಹೋಗುವ ಸಮಯ ಬಂದಿದೆ ಎಂದು ಅಶೋಕ್ ಕಿಡಿ ಕಾರಿದರು.