ಬೆಂಗಳೂರು: ರಾಜ್ಯದ ಕಾಂಗ್ರೆಸ್ ಪಕ್ಷ, ಕಾಂಗ್ರೆಸ್ ಸರ್ಕಾರವು ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದ ದಿನದಿಂದಲೂ ಬೆಲೆ ಏರಿಕೆಯ ಕೊಡುಗೆಯನ್ನು ವರ್ಷದುದ್ದಕ್ಕೂ ಜನರಿಗೆ ನೀಡಿದೆ ಎಂದು ರಾಜ್ಯದ ಮಾಜಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಕಿಡಿಕಾರಿದ್ದಾರೆ.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಜನರ ರಕ್ತ ಹೀರುವುದು, ಬೆಲೆ ಏರಿಕೆಯ ಬರೆ ಎಳೆಯುವುದೇ ಈ ಸರ್ಕಾರದ ಸಾಧನೆ ಎಂದು ಟೀಕಿಸಿದರು. ಬೆಲೆ ಏರಿಕೆ ಮತ್ತು ಹಣದುಬ್ಬರದ ಗ್ಯಾರಂಟಿಯನ್ನು ಕಾಂಗ್ರೆಸ್ ಸರ್ಕಾರ ನೀಡುತ್ತಿದೆ ಎಂದು ದೂರಿದರು.
Pavithra Gowda: ನಟಿಯಾಬೇಕೆನ್ನುವ ಕನಸು ಕಂಡಿದ್ದ ಪವಿತ್ರಾ ಗೌಡ ಲೈಫ್ ಹೇಗಿತ್ತು ಗೊತ್ತಾ..?
ಹೈನುಗಾರರಿಗೆ ಹಾಲಿನ ಸಬ್ಸಿಡಿ ನೀಡಿಲ್ಲ. ರೈತರಿಗೆ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ನೀಡಬೇಕಾದ ಹಣ ನೀಡುತ್ತಿಲ್ಲ. ಬರ ನಿರ್ವಹಣೆಯಲ್ಲಿ ಸರ್ಕಾರ ತನ್ನ ಪಾಲಿನ ಹಣವನ್ನೂ ನೀಡಿಲ್ಲ. ರೈತರ ಮೇಲೆ ಬಿತ್ತನೆ ಬೀಜದ ದರದಿಂದ ಆರಂಭಿಸಿ ವಿದ್ಯುತ್ತಿನವರೆಗೆ, ನೀರಿನ ದರವನ್ನೂ ಹೆಚ್ಚಿಸಿಕೊಂಡು ಬರುತ್ತಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.