ಚಿತ್ರದುರ್ಗ:– ಡಿಕೆಶಿ ವಿರುದ್ಧ CBI ತನಿಖೆ ಹಿಂಪಡೆದ ಸರ್ಕಾರದ ನಿರ್ಧಾರವನ್ನು ವಿಪಕ್ಷ ನಾಯಕ ಆರ್ ಅಶೋಕ್ ಖಂಡಿಸಿದ್ದಾರೆ. ವಿಪಕ್ಷ ನಾಯಕ ಸ್ಥಾನ ಪಡೆದ ಬಳಿಕ ಮೊದಲ ಬಾರಿಗೆ ಚಿತ್ರದುರ್ಗಕ್ಕೆ ಆಗಮಿಸಿದ್ದ ಅವರು ಶಿವಶರಣ ಮಾದಾರ ಚನ್ನಯ್ಯ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶಿರ್ವಾದ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ರಕ್ಷಣೆಗಾಗಿ ಕಾಂಗ್ರೆಸ್ ಕಾನೂನನ್ನು ಉಲ್ಲಂಘಿಸಿದೆ ಎಂದಿದ್ದಾರೆ.
ಡಿಕೆಶಿ ವಿರುದ್ಧದ ಅಕ್ರಮ ಆಸ್ತಿ ಕೇಸ್ನ್ನು ಸಿಬಿಐನಿಂದ ಮರಳಿ ಪಡೆದ ರಾಜ್ಯ ಸಚಿವ ಸಂಪುಟದ ತೀರ್ಮಾನ ಅಕ್ರಮ ಹಾಗೂ ಅನ್ಯಾಯವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಕೀಲರಾಗಿದ್ದವರು, ಈ ರೀತಿಯ ತೀರ್ಮಾನಕ್ಕೆ ಒಪ್ಪಿಗೆ ಸೂಚಿಸುತ್ತಿರಲಿಲ್ಲ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಸುರ್ಜೇವಾಲಾ ಅವರ ಒತ್ತಡದಿಂದಾಗಿ ಸಿಎಂ ಒಪ್ಪಿದ್ದಾರೆ. ಇದು ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ಕಪ್ಪು ಚುಕ್ಕಿ ಎಂದಿದ್ದಾರೆ.
NPCI guidelines: ಒಂದು ವರ್ಷದಿಂದ ಯಾವುದೇ ವಹಿವಾಟು ನಡೆಸದ ಯುಪಿಐ ಐಡಿ, ಯುಪಿಐ ನಂಬರ್ ಡೀ ಆ್ಯಕ್ಟಿವೇಟ್: ಕಾರಣ!
ಡಿಕೆಶಿ ರಕ್ಷಣೆಗಾಗಿಯೇ ವಿಶೇಷ ಸಂಪುಟ ಸಭೆ ನಡೆದಿದೆ. ಈ ಹಿಂದೆ ಸಣ್ಣ ವಿಚಾರಕ್ಕೂ ದೊಡ್ಡದಾಗಿ ಪ್ರಚಾರ ಪಡೆದು ಬಳಿಕ ಘೋಷಿಸುವ ಸಂಪ್ರದಾಯವಿತ್ತು. ಈ ಸರ್ಕಾರ ಎಲ್ಲವನ್ನೂ ರಹಸ್ಯವಾಗಿ ಸಿದ್ಧಪಡಿಸಿಕೊಂಡು ಏಕಾಏಕಿ ಘೋಷಣೆ ಮಾಡಿದೆ. ಹೀಗಾಗಿ ಇದೊಂದು ರೀತಿ ನ್ಯಾಯಾಂಗದ ಕಣ್ಣಿಗೆ ಮಣ್ಣೆರಚುವ ಕೆಲಸವಾಗಿದೆ. ಸಿಬಿಐ 70% ರಷ್ಟು ತನಿಖೆ ಮುಗಿಸಿದ್ದು, ಈ ವೇಳೆ ಕೇಸ್ ವಾಪಸ್ಗೆ ನಿರ್ಧಾರ ಮಾಡಿದ್ದು ಸರಿಯಲ್ಲ ಎಂದು ಹೇಳಿದ್ದಾರೆ.