ಹುಬ್ಬಳ್ಳಿ: ನೇಹಾ ಹತ್ಯೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೀಳು ಮಟ್ಟದ ಹೇಳಿಕೆ ನೀಡಿದ್ದು, ಕೊಲೆಗಡುಕರಿಗೆ ಹೆದರಿಕೆ ಇಲ್ಲದಂತಾಗಿ ಇದೀಗ ಹುಬ್ಬಳ್ಳಿಯಲ್ಲಿ ಮತ್ತೊಂದು ಯುವತಿಯ ಹತ್ಯೆಯಾಗಿದೆ ಎಂದು ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ ಗಂಭೀರ ಆರೋಪ ಮಾಡಿದ್ದಾರೆ. ಇದೇವೇಳೆ ಇಡೀ ದೇಶದ ಗಮನ ಸೆಳೆದಿರುವ ನೇಹಾ ಹಾಗೂ ಅಂಜಲಿ ಕೊಲೆ ಪ್ರಕರಣಗಳನ್ನು ತ್ವರಿತ ನ್ಯಾಯಾಲಯ ಮೂಲಕ ವಿಚಾರಣೆ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೇಹಾ ಪ್ರಕರಣದಲ್ಲಿ ರಾಜ್ಯ ಸರ್ಕಾರ ಗಂಭೀರವಾಗಿ ವರ್ತಿಸಬೇಕಿತ್ತು. ಜನ ಹೋರಾಟ ಮಾಡಿದ ಮೇಲೆ ಎಚ್ಚರಗೊಂಡು ಹೇಳಿಕೆ ನೀಡಿದರೆ ಸಾಲದು ಸಿದ್ದರಾಮಯ್ಯ ಗಡಗಣನೆ ಹೇಳಿಕೆ ಕೊಟ್ಟ ಪರಿಣಾಮ ಈ ಘಟನೆಗಳು ನಡೆದಿವೆ. ಕಳೆದ 4 ತಿಂಗಳಲ್ಲಿ ರಾಜ್ಯದಲ್ಲಿ 430 ಕೊಲೆ, 692 ರೈತರ ಆತ್ಮಹತ್ಯೆ, ಮಹಿಳೆಯರ ಮೇಲಿನ ದೌರ್ಜನ್ಯಗಳು ಹೆಚ್ಚಾಗಿವೆ ಎಂದು ದೂರಿದರು.
![Demo](https://ainlivenews.com/wp-content/uploads/2023/12/spoorthi-1.jpg)
ಗಮನಿಸಿ.. ಹೊಸ `APL-BPL’ ರೇಷನ್ ಕಾರ್ಡ್ʼಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ.!
ಈ ಮೊದಲೇ ಅಂಜಲಿ ಕುಟುಂಬಸ್ಥರು ಜೀವ ಬೆದರಿಕೆ ಇದೆ ಎಂದು ಠಾಣೆಗೆ ದೂರು ನೀಡಲು ಹೋದಾಗ ರಾಜಿ ಸಂಧಾನವನ್ನು ಏಕೆ ಮಾಡಬೇಕಿತ್ತು? ರಾಜ್ಯ ಸರ್ಕಾರ ಪೊಲೀಸ್ ಅಧಿಕಾರಿಗಳ ವರ್ಗಾವಣೆಯಲ್ಲಿ ಹಣ ತಗೆದುಕೊಂಡ ಪರಿಣಾಮ ಘಟನೆಗಳು ಆಗುತ್ತಿವೆ. ಸಿದ್ದರಾಮಯ್ಯ ಸರ್ಕಾರದ್ದು ಅಭಿವೃದ್ಧಿಯ ಸಮಾಧಿ, ಹತ್ಯೆ ಹಾಗೂ ಆತ್ಮಹತ್ಯೆ ಟ್ರೇಡ್ ಮಾರ್ಕ್ ಆಗಿದೆ ಇದೊಂದು ಜನರ ಜೀವಕ್ಕೆ ಗ್ಯಾರಂಟಿಯಿಲ್ಲದ ಸರ್ಕಾರ ಎಂದು ಆರೋಪಿಸಿದರು.
![](https://ainlivenews.com/wp-content/uploads/2024/01/Ad-Banner-copy-scaled.jpg)